ರಾಜ್ಯ

ಧಾರವಾಡದಲ್ಲಿ ಎಸಿಬಿ ಬಲೆಗೆ ಬಿದ್ದ ಕಾರ್ಯನಿರ್ವಾಹಕ ಇಂಜಿನಿಯರ್ ಮನೋಹರ ಮಂಡೋಲಿಕರ್

ಧಾರವಾಡ prajakiran.com : ನಾಲ್ಕನೇ ದರ್ಜೆ ಗುತ್ತಿಗೆದಾರರ ಲೈಸನ್ಸ್ ಮಾಡಿಕೊಡಲು ಲಂಚದ ಬೇಡಿಕೆಯಿಟ್ಟಿದ್ದ ಪಂಚಾಯತ್ ರಾಜ್ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಒಬ್ಬರು ಎಸಿಬಿ ಬಲೆಗೆ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿರುವ ಘಟನೆ ಧಾರವಾಡದಲ್ಲಿ ಮಂಗಳವಾರ ನಡೆದಿದೆ. ಧಾರವಾಡ ಎಸಿಬಿ ಡಿವೈಎಸ್ಪಿ ವೇಣುಗೋಪಾಲ ಅವರ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದಅಧಿಕಾರಿಗಳು ಬಲೆಗೆ ಕೆಡವಿದ್ದಾರೆ. ಕಲಘಟಗಿಯ ಕಲ್ಲಪ್ಪ ಶಿರಬಡಗಿ ಎಂಬುವರಿಗೆ ನಾಲ್ಕನೇ ದರ್ಜೆ ಗುತ್ತಿಗೆದಾರ ಪರವಾನಿಗೆ ಮಾಡಿಸಲು ಲಂಚದ ಬೇಡಿಕೆಯಿಟ್ಟಿದ್ದರಿಂದಅವರು ಹಲವು ಬಾರಿ ಅಲೆದಾಡಿ ಬೇಸತ್ತಿದ್ದರು.   […]