ರಾಜ್ಯ

ಹಿರಿಯ ಸಾಹಿತಿ, ವಿಮರ್ಶಕ ಡಾ. ಜಿ. ಎಸ್. ಆಮೂರ ಇನ್ನಿಲ್ಲ  

ಬೆಂಗಳೂರು prajakiran.com : ನಾಡಿನ ಹಿರಿಯ ಸಾಹಿತಿ, ವಿಮರ್ಶಕರಾಗಿದ್ದ ಡಾ. ಜಿ.ಎಸ್. ಆಮೂರ (95) ಅವರು ಬೆಂಗಳೂರಿನಲ್ಲಿ ಸೋಮವಾರ ಬೆಳಗ್ಗೆ ವಿಧಿವಶರಾದರು. ಅವರು ಕಳೆದ ಹದಿನೈದು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದ್ದಾರೆ. ಡಾ. ಗುರುರಾಜ ಶ್ಯಾಮಾಚಾರ ಆಮೂರರು (ಜಿ.ಎಸ್. ಆಮೂರರು) ಹಲವು ದಶಕಗಳಿಂದ ಧಾರವಾಡದಲ್ಲಿ ನೆಲೆಸಿರುವ ಕನ್ನಡದ ಖ್ಯಾತ ವಿಮರ್ಶಕ ಮತ್ತು ಸಾಹಿತಿಗಳಾಗಿದ್ದಾರೆ.   ಇವರ “ಭುವನದ ಭಾಗ್ಯ”  ಕೃತಿಗೆ ೧೯೯೬ ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ. […]