ಅಪರಾಧ

ರಾಯಚೂರು ಜಿಲ್ಲೆಯಲ್ಲಿ ಹಾಡ ಹಗಲೇ ನಾಲ್ವರ ಬರ್ಬರ ಕೊಲೆ

ರಾಯಚೂರು prajakiran.com  : ಹಳೆ ವೈಷಮ್ಯ ಹಾಗೂ ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ನಾಲ್ವರನ್ನು ಹಾಡ ಹಗಲೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಸಿಂಧನೂರು ನಗರದ ಸುಕಾಲಪೇಟೆಯ ಮನೆಯ ಮುಂದೆ ಇಬ್ಬರು ಪುರುಷರು, ಇಬ್ಬರ ಮಹಿಳೆಯರನ್ನು ಬರ್ಬರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಯಾದವರನ್ನು ಸಾವಿತ್ರಮ್ಮ (55), ಶ್ರೀದೇವಿ(38), ಹನುಮೇಶ್ (35) ನಾಗರಾಜ್ (33) ಎಂದು ಗುರುತಿಸಲಾಗಿದೆ. ಅಲ್ಲದೆ, ಈ ಘಟನೆಯಲ್ಲಿ‌ ಇನ್ನೂ ಮೂವರಿಗೆ  ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಸಮೀಪದ  ಆಸ್ಪತ್ರೆಗೆ ದಾಖಲಿಸಿ […]