ಬೆಂಗಳೂರು prajakiran.com : ರಾಜ್ಯದಲ್ಲಿ ಜಾರಿ ತಂದಿರುವ #ವಿದ್ಯಾಗಮ ಕಾರ್ಯಕ್ರಮದ ಕುರಿತು ಕೆಲವು ವಲಯಗಳಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿರುವುದನ್ನು ಗಮನಿಸಿ, ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ತಮ್ಮ ಮುಖಪುಸ್ತಕದಲ್ಲಿ ಬರೆದುಕೊಂಡಿರುವಅವರು, #ವಿದ್ಯಾಗಮ ಸಮಾಜದ ಕೆಳಸ್ಥರದ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮ ಎಂದು ವಿವರಿಸಿದ್ದಾರೆ. ಆದರೂ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ […]
Tag: suresh kumar s
ನವೆಂಬರ್ ಅಂತ್ಯದವರೆಗೆ ಶಾಲೆ ಆರಂಭ ಪ್ರಶ್ನೆಯೇ ಇಲ್ಲ ಎಂದ ಸುರೇಶಕುಮಾರ್
ಬೆಂಗಳೂರು prajakiran.com : ರಾಜ್ಯದ 40 ಶಾಸಕರ ಅಭಿಪ್ರಾಯವನ್ನು ಸ್ವತಃ ಭೇಟಿ ಮಾಡಿ ಸಂಗ್ರಹಿಸಿದ್ದೇನೆ. ರಾಜ್ಯದ ಬಹುತೇಕ ಶಾಸಕರು ನವೆಂಬರ್ ಅಂತ್ಯದವರೆಗೆ ಶಾಲೆ ಆರಂಭಿಸುವುದು ಬೇಡ ಎಂದಿದ್ದಾರೆ. ಹೀಗಾಗಿ ರಾಜ್ಯದ ಶಿಕ್ಷಣ ಇಲಾಖೆ ಮುಂದೆ ಸದ್ಯಕ್ಕೆ ಶಾಲೆ ಆರಂಭಿಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಶಿಕ್ಷಣ ಸಚಿವ ಸುರೇಶಕುಮಾರ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಬರುವ ಶುಕ್ರವಾರ ಹಾಗೂ ಸೋಮವಾರ ಮಹತ್ವದ ಸಭೆ ನಡೆಸಲಾಗುವುದು. ಸಭೆಯಲ್ಲಿ ಶಿಕ್ಷಣ ತಜ್ಞರ, ಬಿಇಒ ಜೊತೆಗೆ ಸಮಾಲೋಚಿಸಿ, ಆನಂತ ನಿರ್ಧಾರ ಪ್ರಕಟಿಸಲಾಗುವುದು ಎಂದರು. […]