ಧಾರವಾಡ prajakiran.com : ಧಾರವಾಡ ತಾಲೂಕಿನ ಗರಗ ರಸ್ತೆಯಲ್ಲಿರುವ ಟಾಟಾಮಾರ್ಕೊಪೊಲೊ ಕಂಪನಿಯನ್ನು ಜುಲೈ 26ರಿಂದ ಬರುವ ಸೋಮವಾರ ಆಗಸ್ಟ್ 3 ರವರೆಗೆ ಮುಚ್ಚಲು ಕಾರ್ಖಾನೆ ಆಡಳಿತ ಮಂಡಳಿ ನಿರ್ಧರಿಸಿದೆ. ಈ ಕುರಿತು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕಂಪನಿಯ ಸಿಇಓ ಅವರೊಂದಿಗೆ ಸಭೆ ನಡೆಸಿದ ನಂತರ ಈ ತೀರ್ಮಾನ ಕೈಗೊಳ್ಳಲಾಗಿದೆ. ಕಂಪನಿಯ ಕಾರ್ಮಿಕರಿಗೆ ಸೋಂಕು ಕಾಣಿಸಿಕೊಂಡಿರುವುದರಿಂದ ಸ್ಯಾನಿಟೈಸೇಷನ್, ತಪಾಸಣೆ ನಿರಂತರವಾಗಿ ನಡೆಸಲಾಗುತ್ತಿದೆ. ಕಾರ್ಮಿಕರು,ಸಿಬ್ಬಂದಿ ಹಾಗೂ ಕಂಪನಿಯ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಎಂಟು ದಿನಗಳ ಕಾಲ ಕೈಗಾರಿಕಾ […]