ರಾಜ್ಯ

ವಿದ್ಯಾಗಮ ಮಕ್ಕಳಿಂದ ಪ್ರಾರ್ಥನೆ ಹೇಳಿಸಿ, ಪಾಠ ಮಾಡಿದ ಶಿಕ್ಷಣ ಸಚಿವರು

ಧಾರವಾಡ prajakiran.com : ವಿದ್ಯಾಗಮ ಕಾರ್ಯಕ್ರಮದ ಪರಿಶೀಲನೆಗಾಗಿ  ಧಾರವಾಡ ಗ್ರಾಮೀಣ ವಿಭಾಗದ ಸಲಕಿನಕೊಪ್ಪ ಹಾಗೂ ಬಾಡ ಗ್ರಾಮಗಳಿಗೆ ಭೇಟಿ ನೀಡಿದ ಶಿಕ್ಷಣ ಸಚಿವ ಎಸ್. ಸುರೇಶಕುಮಾರ್ ಅವರು ಮಕ್ಕಳಿಂದ ನಾಡಗೀತೆ ಹಾಡಿಸಿ ಪಾಠ, ಮಗ್ಗಿ ಹೇಳಿಸಿ ಮಕ್ಕಳ ಶಿಕ್ಷಣಮಟ್ಟ ಪರೀಕ್ಷಿಸಿದರು. ಸಲಕಿನಕೊಪ್ಪ ಗ್ರಾಮದಲ್ಲಿ ವಿದ್ಯಾಗಮ ಪಾಠದಲ್ಲಿ ನಿರತರಾಗಿರುವ ಮಕ್ಕಳಿಗೆ ಭಾರತದ ಮೊದಲ ರಾಷ್ಟ್ರಪತಿ ಯಾರು, ಮಗ್ಗಿಯನ್ನು ಕ್ರಮವಾಗಿ ಹಾಗೂ ವಿರುದ್ಧವಾಗಿ ಹೇಳಿಸಿದರು. ಮಕ್ಕಳ ಕೈಬರಹ ಕಂಡು ಸಂತಸಪಟ್ಟರು. ಕೊರೊನಾ ನಿಯಂತ್ರಣಕ್ಕೆ ಅನುಸರಿಸಬೇಕಾದ ಕ್ರಮಗಳನ್ನು ಮಕ್ಕಳಿಂದ ವಿವರಿಸಲು ಹೇಳಿದರು. […]