ರಾಜ್ಯ

ಧಾರವಾಡದಲ್ಲಿ ಪೇಟಿಂಗ್ ಕೆಲಸ ಮಾಡುವಾಗ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

ಧಾರವಾಡ prajakiran.com : ಪೇಟಿಂಗ್ ಕೆಲಸ ಮಾಡುವಾಗ ವಿದ್ಯುತ್ ತಂತಿ ತಗುಲಿ ಯುವಕನೊಬ್ಬ ಸಾವನ್ನಪ್ಪಿದ್ದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಮದಿಹಾಳದ ಲಾಸ್ಟ್ ಬಸ್ ನಿಲ್ದಾಣದ ಬಳಿ ಇರುವ ಅಶೋಕ್ ಬಾಬರ್ ಅವರ ಮನೆಯ ಮುಂದೆ ಪೇಟಿಂಗ್ ಮಾಡುವಾಗ ಮನೆ ಮುಂದೆ ಹಾದು ಹೋಗಿದ್ದ  ತ್ರೀಫೇಸ್ ವಿದ್ಯುತ್ ತಂತಿ ತಗುಲಿ ಕೆಳಗೆ ಬಿದ್ದು, ತಲೆಗೆ ಪೆಟ್ಟಾಗಿ ತೀವ್ರ ರಕ್ತ ಸ್ರಾವವಾಗಿತ್ತು. ಕೂಡಲೇ  ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಆತನ ಪತ್ನಿ […]

ಅಪರಾಧ

ಧಾರವಾಡದಲ್ಲಿ ಎಂಟು ವರ್ಷದ ಬಾಲಕಿ ಮೇಲೆ ದೌರ್ಜನ್ಯ

ಧಾರವಾಡ prajakiran.com : ಧಾರವಾಡದ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬಡಾವಣೆಯೊಂದರಲ್ಲಿ ಎಂಟು ವರ್ಷದ ಬಾಲಕಿ ಮೇಲೆ  ದೌರ್ಜನ್ಯ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿಯನ್ನು ಮೊಬೈಲ್ ಕೊಟ್ಟ ಹಾಗೆ ಮಾಡಿ ಪುಸಲಾಯಿಸಿ, ಮನೆಗೆ ಕರೆದುಕೊಂಡು ಹೋಗಿ ದೌರ್ಜನ್ಯವೆಸಗಿದ್ದಾನೆ. ಅಲ್ಲದೆ, ಪೋಷಕರಿಗೆ ವಿಷಯ ತಿಳಿಸದಂತೆ ಜೀವ ಬೆದರಿಕೆ ಒಡ್ಡಿದ್ದ ಎಂದು ಆಕೆಯ ಪೋಷಕರು ದೂರಿನಲ್ಲಿ ಆರೋಪಿಸಿದ್ದಾರೆ. ಆರೋಪಿ ಶಂಕರ್ ವಿರುದ್ದ ಕಲಂ 342, 376, 506 ಐಪಿಸಿ ಹಾಗೂ ಪೋಸ್ಕೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡ ಧಾರವಾಡ […]

ಅಪರಾಧ

ಧಾರವಾಡದ ಗ್ರಾಮ ದೇವಿ ಬಾಗಿಲು ಮುರಿದು ಕಳ್ಳತನಕ್ಕೆ ಯತ್ನ…!

ಧಾರವಾಡ prajakiran.com : ದೇವಸ್ಥಾನದಲ್ಲಿನ ವಿಗ್ರಹಕ್ಕೆ ಹಾಕಿದ್ದ ಚಿನ್ನದ ಆಭರಣಗಳನ್ನು ಕಳ್ಳತನ ಮಾಡಲು ವಿಫಲ ಯತ್ನ ನಡೆಸಿದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಹೊಸಯಲ್ಲಾಪೂರ ದ್ಯಾಮವ್ವನ ಗುಡಿ ಓಣಿಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಇದು ಸ್ಥಳೀಯರಿಗೆ ಹಾಗೂ ಗ್ರಾಮದೇವಿ ಸದ್ಭಕ್ತರಿಗೆ ಆತಂಕ ಮೂಡಿಸಿದೆ. ದ್ಯಾಮವ್ವನ ಗುಡಿ ಓಣಿಯಲ್ಲಿನ ಗ್ರಾಮ ದೇವಿಯ ದೇವಸ್ಥಾನದ ಬಾಗಿಲಿನ ಕೀಲಿ ಮುರಿದು, ವಿಗ್ರಹಕ್ಕೆ ಹಾಕಿದ್ದ ಚಿನ್ನದ ಆಭರಣಗಳನ್ನು ಕಳ್ಳತನ ಮಾಡಲು ಯತ್ನಿಸಲಾಗಿದೆ. ಆದರೆ ಯಾವುದೇ ನಗ, ನಾಣ್ಯ ಹಾಗೂ ಚಿನ್ನಾಭರಣ […]

ಅಪರಾಧ

ಧಾರವಾಡದಲ್ಲಿ ಗಾಂಜಾ ಜಾಲ ಭೇದಿಸಿದ ಪೊಲೀಸರು

ಆರು ಆರೋಪಿಗಳು ಅಂದರ್ ಧಾರವಾಡ prajakiran.com : ಗಾಂಜಾ ಮಾರಾಟ ಮಾಡುತ್ತಿದ್ದ ೬ ಜನ ಆರೋಪಿಗಳನ್ನು ಧಾರವಾಡ ಶಹರ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಡಿಸಿಪಿ ಕೃಷ್ಣಕಾಂತ ತಿಳಿಸಿದರು. ಅವರು ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆರೋಪಿಗಳು ಶಹರದ ನುಚ್ಚಂಬ್ಲಿ ಬಾವಿ ಹತ್ತಿರ ಕಾರು ಮತ್ತು ಬೈಕ್‌ನಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟಕ್ಕೆ ಯತ್ನಿಸಿದ ಸಂದರ್ಭದಲ್ಲಿ ಪೊಲೀಸರು ಬಂಧಿಸಿದ್ದಾರೆ. ಧಾರವಾಡ ಮದಾರಮಡ್ಡಿ ಜೈಭೀಮನಗರದ ಪೃಥ್ವಿ ಗಿರೀಶ ಕೊಂಡಪಲ್ಲಿ, ಲೈನ ಬಜಾರ್ ಸೌದಾಗರ ಚಾಳನ ಸತ್ಕಾರ ಗೋವಿಂದ ಮಾಡಲಗಿ, […]