ಧಾರವಾಡ prajakiran.com : ಕೆರೆಯಲ್ಲಿ ಬಾಲಕರಿಬ್ಬರು ಮುಳುಗಿ ದುರ್ಮರಣವನ್ನಪ್ಪಿದ್ದ ಘಟನೆ ಧಾರವಾಡ ತಾಲೂಕಿನ ಕ್ಯಾರಕೊಪ್ಪ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಆಕಳು ಮೈ ತೊಳೆಯಲು ಹೋಗಿ ಬಾಲಕರಿಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತ್ಯುಂಜಯ ಕಾಮಧೇನು ಹಾಗೂ ರೋಹಿತ ಪೂಜಾರಿ ಎಂಬ ಬಾಲಕರೇ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸಾವಿಗೀಡಾದ ಈ ಮಕ್ಕಳು 13 ಹಾಗೂ 14 ವರ್ಷದ ಮಕ್ಕಳು ಎಂಬುದು ಗೊತ್ತಾಗಿದೆ. ಇದರಿಂದಾಗಿ ಕ್ಯಾರಕೊಪ್ಪ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ […]