ರಾಜ್ಯ

ಹಿರಿಯ ಕವಿ ಡಾ.‌ ವಿ.ಸಿ. ಐರಸಂಗ ಇನ್ನು ನೆನಪು ಮಾತ್ರ

ಧಾರವಾಡ prajakiran.com : ಹಿರಿಯ ಕವಿ ಡಾ‌ ವಿ ‌ಸಿ ಐರಸಂಗಅವರು ಶುಕ್ರವಾರ ಬೆಳಗಿನ ಜಾವ ತಮ್ಮ 91  ‌ನೇ ವಯಸ್ಸಿನಲ್ಲಿ ನಿಧನ ಹೊಂದಿದರು. ಅವರು ಕಳೆದ ಹಲವು ದಿನಗಳಿಂದಅನಾರೋಗ್ಯದಿಂದ ಬಳಲುತ್ತಿದ್ದರು. ರಕ್ತ ಹೀನತೆಯಿಂದ ಅವರು ಬಳಲುತ್ತಿದ್ದರು. ಹೀಗಾಗಿ ಅವರನ್ನು ಧಾರವಾಡದ ಜರ್ಮನ್ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಹಲೋಕ ತ್ಯಜಿಸಿದರು. ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಡಾ. ವಿ ಸಿ ಐರಸಂಗ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ ಗೌರವ ಡಾಕ್ಟರೇಟ್ […]