ರಾಜ್ಯ

ವೀರಶೈವ-ಲಿಂಗಾಯತ ಸಮಾಜದ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ

ಧಾರವಾಡ prajakiran.com : ವೀರಶೈವ-ಲಿಂಗಾಯತ ಸಮಾಜದ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಈಡೇರಿಸಲು ಸರಕಾರ ಮುಂದಾಗಬೇಕು. ಇಲ್ಲದಿದ್ದರೆ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ವೀರಶೈವ-ಲಿಂಗಾಯತ ಸಮಾಜದ ಮುಖಂಡರು ಎಚ್ಚರಿಸಿದರು. ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ವೀರಶೈವ-ಲಿಂಗಾಯತ ಸಮಾಜವನ್ನು ಹಿಂದುಳಿದ ವರ್ಗದ (ಓಬಿಸಿ) ಪಟ್ಟಿಗೆ ಸೇರಿಸಬೇಕು ಹಾಗೂ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಆಗ್ರಹಿಸಿ ಹಮ್ಮಿಕೊಂಡಿದ್ದ ಸಾಂಕೇತಿಕ ಧರಣಿಯಲ್ಲಿ ಸರಕಾರದ ಗಮನ ಸೆಳೆಯಲಾಯಿತು. ಮಾಜಿ ಸಭಾಪತಿ ವೀರಣ್ಣ ಮತ್ತೀಕಟ್ಟಿ ಮಾತನಾಡಿ, ಮಹಾಸಭಾದ ಪದಾಧಿಕಾರಿಗಳನ್ನೊಳಗೊಂಡ […]