ರಾಜ್ಯ

ರಾಜ್ಯದಲ್ಲಿ ಗುರುವಾರ ಸೋಂಕಿಗೆ ಬರೋಬ್ಬರಿ 83 ಸಾವು, 6128 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಗುರುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 83 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 6128 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,18,632 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 3793 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  46,694 ಜನ ಗುಣಮುಖರಾಗಿದ್ದು, 69,700 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 620 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ […]

ರಾಜ್ಯ

ದಕ್ಷಿಣ ಕನ್ನಡ, ವಿಜಯಪುರ, ಚಿತ್ರದುರ್ಗ ಜಿಲ್ಲಾಧಿಕಾರಿ ಸೇರಿ ಹಲವು ಐ ಎ ಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು prajakiran.com : ರಾಜ್ಯದ ಬಿಜೆಪಿ ಸರಕಾರ ಒಂದು ವರ್ಷವನ್ನು ಯಶಸ್ವಿಯಾಗಿ ಪೂರೈಸಿದ ಬೆನ್ನಲ್ಲೇ ಹತ್ತು ಹಲವು ಐ ಎ ಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಿರಿಯ ಐ ಎ ಎಸ್ ಅಧಿಕಾರಿಗಳ ರಾಜಕುಮಾರ ಖತ್ರಿ ಅವರನ್ನು ಕೃಷಿ ಇಲಾಖೆಯಿಂದ ಕಾರ್ಮಿಕ ಇಲಾಖೆಗೆ ವರ್ಗಾವಣೆ ಮಾಡಿದೆ. ಕಾರ್ಮಿಕ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿದ್ದ ಮಹೇಶ್ವರ ರಾವ್ ಎ. ಅವರ ಸ್ಥಾನಕ್ಕೆ ನಿಯೋಜಿಸಿದೆ. ಎನ್. ನಾಗಾಂಬಿಕಾ ದೇವಿ ಅವರನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹಿಳಾ ಮತ್ತು ಮಕ್ಕಳಅಭಿವೃದ್ದಿ […]

ಅಪರಾಧ

ಕೃಷ್ಣಾನದಿಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ…..!

ವಿಜಯಪುರ prajakiran.com :  ಪತಿ ಮೃತಪಟ್ಟ ಹಿನ್ನೆಲೆಯಲ್ಲಿ ಮನನೊಂದು ಮಾನಸಿಕ ಅಸ್ವಸ್ಥ ಮಗಳೊಂದಿಗೆ ತಾಯಿಕೂಡ ಕೃಷ್ಣಾನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಕೋಲ್ಹಾರ ತಾಲೂಕಿನ ಬಳೂಕಿ ಜಾಕ್ ವೆಲ್ ನಲ್ಲಿ ಭಾನುವಾರ ಈ ರ್ದುಘಟನೆ ನಡೆದಿದೆ ಮೃತರನ್ನು ಶಕುಂತಲಾ ಖೇಡ್ ( 50) ಹಾಗೂ ಗಂಗಾ ( 22 ) ಎಂದು ಗುರುತಿಸಲಾಗಿದೆ. ಶಕುಂತಲಾ ಅವರ ಪತಿ ಸಿದ್ದಣ್ಣ ಖೇಡ್ ಕಳೆದ ಒಂದೂವರೆ ವರ್ಷದ ಹಿಂದೆ ಮೃತಪಟ್ಟಿದ್ದರು. ಇದರಿಂದ ತೀವ್ರವಾಗಿ ನೊಂದಿದ್ದ […]

ರಾಜ್ಯ

ಚಿಕಿತ್ಸೆ ನಿರಾಕರಿಸಿದಕ್ಕೆ ರೋಗಿಯೊಂದಿಗೆ ವಿಜಯಪುರ ಡಿಸಿ ಕಚೇರಿಗೆ ಬಂದ ಕುಟುಂಬಸ್ಥರು…!

ವಿಜಯಪುರ prajakiran.com : ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ರೋಗಿಯ ಚಿಕಿತ್ಸೆಯನ್ನು ಜಿಲ್ಲಾಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆ ವೈದ್ಯರು ನಿರಾಕರಿಸಿದ ಹಿನ್ನೆಲೆ ಕುಟುಂಬಸ್ಥರು ಕಾರ್‍ನಲ್ಲಿ ರೋಗಿಯೊಂದಿಗೆ ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಘಟನೆ ಶುಕ್ರವಾರ ನಡೆದಿದೆ. ಜಿಲ್ಲೆಯ ಸಿಂದಗಿ ತಾಲೂಕಿನ ಮಲಘಾಣ ಗ್ರಾಮದ ಜಮೀಲ್ ಅಹಮ್ಮದ್ ಎಂಬವರು ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದರು.  ಗುರುವಾರ ತಡ ರಾತ್ರಿ ಸಿಂದಗಿ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರಕ್ಕೆ ಕರೆತಂದಿದ್ದಾರೆ. ರೋಗಿ ತೀವ್ರ ಉಸಿರಾಟದಿಂದ […]

ರಾಜ್ಯ

ವಿಜಯಪುರದಲ್ಲಿ ಆತಂಕ‌ ಸೃಷ್ಠಿಸಿದ  ಸೀಲ್ ಹಾಕಿದ್ದ ವ್ಯಕ್ತಿ ಓಡಾಟ….!

 ವಿಜಯಪುರ prajakiran.com : ಕೈಗೆ ಕ್ವಾರಂಟೈನ್ ಸೀಲ್ ಹೊಂದಿದ ವ್ಯಕ್ತಿಯ ಓಡಾಟದಿಂದ ಕೆಲ ಕಾಲ ವಿಜಯಪುರ ನಗರದಲ್ಲಿ ಜನತೆ ಭಯಭೀತರಾಗಿದ್ದ ಘಟನೆ ಬುಧವಾರ ನಡೆದಿದೆ. ವಿಜಯಪುರ ನಗರದ ಸ್ಟೇಷನ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ನಗರದ ಬಡಿಕಮಾನ ರಸ್ತೆಯಲ್ಲಿನ ಮಿನಿ‌ ಬಸ್ ನಿಲ್ದಾಣದಲ್ಲಿ ವ್ಯಕ್ತಿ ಕಾಣಿಸಿಕೊಂಡಿದ್ದ. ಇದರಿಂದಾಗಿ ಕ್ವಾರಂಟೈನ್ ನಿಂದ ತಪ್ಪಿಸಿಕೊಂಡು ಬಂದಿರುವ ಶಂಕೆ ವ್ಯಕ್ತಪಡಿಸಿ ಜನತೆ ಕಳವಳ ವ್ಯಕ್ತಪಡಿಸಿದರು. ಇತ ಹೋಂ ಕ್ವಾರಂಟೈನ್ ನಲ್ಲಿದ್ದನೋ ಅಥವಾ ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇದ್ದನೋ ಎಂಬುದು ಗೊತ್ತಾಗಿಲ್ಲ. ಸೀಲ್ […]

ರಾಜ್ಯ

ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಪೊಲೀಸ್ ಲಾಠಿ ರುಚಿ

ವಿಜಯಪುರ prajakiran.com : ಬಹು ಚರ್ಚಿತವಾಗಿರುವ ವಿಜಯಪುರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ವೇಳೆ ಕಾಂಗ್ರೆಸ್ ಮುಖಂಡರು ಬಿಜೆಪಿಯ ಸದಸ್ಯರನ್ನು ಸೆಳೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯ ಕರ್ತರು ಜಿಪಂ ಮುಖ್ಯದ್ವಾರ ಬಳಿ ನಡೆಸಿದ ಪ್ರತಿಭಟನೆ ವೇಳೆ ಜನ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು. ಜಿ.ಪಂ 42 ಸದಸ್ಯರಲ್ಲಿ ಅಧ್ಯಕ್ಷ ಸ್ಥಾನ ಪಡೆಯಲು 22ಸ್ಥಾನದ ಅವಶ್ಯಕಕತೆ ಇದೆ. ಬಿಜೆಪಿ-20 ಕಾಂಗ್ರೆಸ್-18, ಜೆಡಿಎಸ್ 3 ಹಾಗೂ ಪಕ್ಷೇತರ ಒಬ್ಬ ಸದಸ್ಯನಿದ್ದಾನೆ. ಮಂಗಳವಾರ ಅಧ್ಯಕ್ಷ ಸ್ಥಾನದ […]