ರಾಜ್ಯ

ವಿನಯ ಕುಲಕರ್ಣಿ ಕ್ಲೀನ್ ಚಿಟ್ ತೆಗೆದುಕೊಂಡು ಹೊರಗೆ ಬರುತ್ತಾರೆ ಎಂದ ಲಕ್ಷ್ಮಿ ಹೆಬ್ಬಾಳಕರ್

ಧಾರವಾಡ prajakiran.com : ಧಾರವಾಡದ ಬಾರಾಕೋಟ್ರಿಯಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಮನೆಗೆ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸ್ಥೈರ್ಯ ತುಂಬಿದರು. ಬಳಿಕ ಹೇಳಿಕೆ ನೀಡಿದಅವರು,  ಇದು ಏಕೆ ನಡೆದಿದೆ ಅನ್ನೋದು ಎಲ್ಲರಿಗೂ ಗೊತ್ತಿರೋ ವಿಚಾರ ಇದೆಲ್ಲಾ ರಾಜಕೀಯವಾಗಿ ನಡೆಯುತ್ತಿದೆ ಎಂದರು. ಕಾನೂನು ಪ್ರಕಾರ ಬಂಧನವಾದರೆ ಆಗಲಿ. ಆದರೆ ಅದರಲ್ಲಿ ರಾಜಕೀಯ ಇರಬಾರದು. ವಿನಯ ಅವರು ಶೀಘ್ರದಲ್ಲಿಯೇ ಕ್ಲೀನ್ ಚಿಟ್  ತೆಗೆದುಕೊಂಡು ಹೊರಗೆ ಬರುತ್ತಾರೆ. ನಮಗೆ ಸಂಪೂರ್ಣ ಭರವಸೆ ಇದೆ. ಎಲ್ಲ ನಾಯಕರು, ಕಾರ್ಯಕರ್ತರು […]

ರಾಜ್ಯ

ಯೋಗೀಶಗೌಡ ಹತ್ಯೆ ಪ್ರಕರಣ : ಜಾಮೀನು ಕೋರಿ ಮಾಜಿ ಸಚಿವ ವಿನಯ ಕುಲಕರ್ಣಿಅರ್ಜಿ

ಧಾರವಾಡ prajakiran.com : ಧಾರವಾಡದ ಬಿಜೆಪಿ ಜಿ.ಪಂ. ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿಗೆ ಜಾಮೀನು ಕೋರಿ ಅವರ ಪರ ವಕೀಲರು  ಅರ್ಜಿ ಸಲ್ಲಿಸಿದ್ದಾರೆ. ಧಾರವಾಡದ ಮೂರನೇ ಅಧಿಕ ವಿಶೇಷ ಹಾಗೂ ಸಿಬಿಐ ನ್ಯಾಯಾಲಯಕ್ಕೆ ಮಂಗಳವಾರ ಅವರ ವಕೀಲರಾದ ಭರತ ಅರ್ಜಿ ಸಲ್ಲಿಸಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ನ್ಯಾಯಾಲಯ ಕೆಲವು ನಿಯಮಗಳನ್ನು ಅಳವಡಿಸಿಕೊಂಡಿದ್ದು, ಸಲ್ಲಿಕೆಯಾಗುವ ಪ್ರತಿ ಅರ್ಜಿಯನ್ನು ಒಂದು ದಿನ ಕಾಯ್ದಿಟ್ಟು, ಸ್ಯಾನಿಟೈಜ್ ಮಾಡಿದ ನಂತರವೇ ನೋಂದಣಿ ಮಾಡಲಾಗುತ್ತದೆ. ೨೪ ಗಂಟೆಗಳ […]

ರಾಜ್ಯ

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಉರುಳಾಗುತ್ತಿರೋ ಸಿಬಿಐ ತನಿಖೆ

ಹುಬ್ಬಳ್ಳಿ prajakiran.com : ಯೋಗೇಶಗೌಡ ಹತ್ಯೆ ಪ್ರಕರಣ ಸಿಬಿಐ ವಶದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಉರುಳಾಗುತ್ತಿದೆ. ಈ ಕೊಲೆ ಪ್ರಕರಣದಲ್ಲಿ ಈವರೆಗೆ 600ಕ್ಕಿಂತ ಹೆಚ್ಚು ಜನರ ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಸಿಬಿಐ  ಹಲವು ಮಹತ್ವದ ಅಂಶಗಳನ್ನು ಪತ್ತೆಹಚ್ಚಿದೆ ಎನ್ನಲಾಗಿದೆ. ಯೋಗಿಶಗೌಡ ಕೊಲೆ ನಡೆದ ವೇಳೆ ದೆಹಲಿಯಲ್ಲಿರೋದಾಗಿ ದಾಖಲೆ ಸೃಷ್ಟಿ ಮಾಡಿದ್ದ ಕುರಿತು ವಿನಯ ಕುಲಕರ್ಣಿ ಸಿಬಿಐ ಅಧಿಕಾರಿಗಳ ಪ್ರಶ್ನೆಗೆ ಸರಿಯಾದ ಉತ್ತರ ಕೊಡಲಿಲ್ಲ ಎಂದು ಹೇಳಲಾಗಿದೆ. ಹೀಗಾಗಿ ನಿನ್ನೆ ವಿನಯ್ ಕುಲಕರ್ಣಿ ಹಾಗೂ ಅವರ ಆಪ್ತ ಕಾರ್ಯದರ್ಶಿ ಸೋಮು […]

ರಾಜ್ಯ

ಮಾಜಿ ಸಚಿವ ವಿನಯ ಕುಲಕರ್ಣಿಗೆ ಒಂದು ದಿನ ನ್ಯಾಯಾಂಗ ಬಂಧನ

ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿಯವರಿಗೆ ಧಾರವಾಡದ ಮೂರನೇ ಅಧಿಕ ವಿಶೇಷ ನ್ಯಾಯಾಲಯ ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮಹತ್ವದ ಆದೇಶ ಹೊರಡಿಸಿದೆ. ಧಾರವಾಡದ ಮೂರನೇ ಅಧಿಕ ವಿಶೇಷ ನ್ಯಾಯಾಲಯ ನ್ಯಾಯಾಧೀಶರಾದ ಪಂಚಾಕ್ಷರಿ ಎಂ. ಅವರು ಈ ಆದೇಶ ಹೊರಡಿಸಿದ್ದಾರೆ. ಸಿಬಿಐ ಅಧಿಕಾರಿಗಳ ಪರ ವಿಶೇಷ ಅಭಿಯೋಜಕರು ವಿನಯ ಕುಲಕರ್ಣಿಯವರನ್ನು ಮೂರು ದಿನಗಳ ಕಾಲ ಹೆಚ್ಚಿನ ವಿಚಾರಣೆಗೆ […]

ರಾಜ್ಯ

ವಿನಯ ಕುಲಕರ್ಣಿ ವಿರುದ್ದ ರಾಜಕೀಯ ಷಡ್ಯಂತ್ರ ಎಂದ ಕೂಡಲ ಸಂಗಮ ಸ್ವಾಮೀಜಿ

ಬೆಂಗಳೂರು prajakiran.com : ಮಾಜಿ ಸಚಿವ ವಿನಯ ಕುಲಕರ್ಣಿಯವರ ವಿರುದ್ದ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಅವರು ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಈ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ವಿನಯಕುಲಕರ್ಣಿ ಲಿಂಗಾಯತ ಹಾಗೂ ಪಂಚಮಸಾಲಿ ಸಮಾಜದ ಮುಖಂಡ.ಅವರ ಬೆಳವಣಿಗೆಯನ್ನು ಸಹಿಸದೆ ಕೆಲವರು ರಾಜಕೀಯ ಲೆಕ್ಕಚಾರಕ್ಕಾಗಿ ಅವರನ್ನು ಬಲಿಪಶು ಮಾಡುತ್ತಿದ್ದಾರೆ ಎಂದು ದೂರಿದರು. ಬಿಜೆಪಿ ನಾಯಕರ ವಿರುದ್ದ ಪತ್ರಿಕಾಗೋಷ್ಠಿಯ ಉದ್ದಕ್ಕೂ ಹರಿಹಾಯ್ದ ಸ್ವಾಮೀಜಿ, ಯಾರ ಹೆಸರನ್ನು […]

ರಾಜ್ಯ

ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣ : ಮಾಜಿ ಸಚಿವ ವಿನಯ ಕುಲಕರ್ಣಿ, ವಿಜಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ

ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳ ತಂಡ ಗುರುವಾರ ಬೆಳ್ಳಂ ಬೆಳಗ್ಗೆ  ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಬಾರಾಕೋಟ್ರಿ ನಿವಾಸದ ಕದವನ್ನು ತಟ್ಟಿದೆ. ಹಲವು ಅಧಿಕಾರಿಗಳ ತಂಡ ಏಕಾಎಕಿ ಅವರ ಮನೆಗೆ ತೆರಳಿ ಅವರನ್ನು ಕರೆದುಕೊಂಡು ಉಪನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಬರುವಂತೆ ಸೂಚಿಸಿದರು. ಆಗ ಅವರ ಪುತ್ರಿ ತಮ್ಮ ಕಾರಿನಲ್ಲಿಯೇ ಅವರನ್ನು ಕರೆದುಕೊಂಡು ಬಂದು ಪೊಲೀಸ್ ಠಾಣೆಗೆ ಬಿಟ್ಟರು. ಇದೇ […]

ರಾಜ್ಯ

ನಾನು ನನ್ನ ಕಾರ್ಯಕರ್ತರನ್ನು ಬಿಟ್ಟು ಎಲ್ಲೂ ಹೋಗಲ್ಲ ಎಂದ ವಿನಯ ಕುಲಕರ್ಣಿ

ಧಾರವಾಡ prajakiran.com : ಕಳೆದ ಕೆಲವು ದಿನಗಳಿಂದ ಬಿಜೆಪಿ ಸೇರುವ ಕುರಿತು ಊಹಾಪೋಹಗಳು ಎದ್ದಿವೆ. ನಾನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿಲ್ಲ ನಾನು ನನ್ನ ಕಾರ್ಯಕರ್ತರನ್ನು ಬಿಟ್ಟು ಎಲ್ಲೂ ಹೋಗಲ್ಲ ಎಂದು ಮಾಜಿ ಸಚಿವ ವಿನಯ ಕುಲಕರ್ಣಿ ಸ್ಪಷ್ಟಪಡಿಸಿದರು. ಅವರು ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಆರು ಕುದುರಿ ಮಾರಾಟ ಮಾಡಿದ್ದೇನೆ.  ಹೊಸ ಕುದುರೆ ನೋಡಲು ಹೋಗಿದ್ದೆ. ನಾನು ರಾಜಸ್ತಾನಕ್ಕೆ ಕುದುರೆ ತರಲು ಹೋಗಿದ್ದೆ. ಹೊರತು […]