ಧಾರವಾಡ prajakiran.com : ಬೆಳಗಾವಿ, ಧಾರವಾಡ ಜಿಲ್ಲೆಯಾದ್ಯಂತ ಸೋಮವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದ ಜನ ಜೀವನಅಸ್ತವ್ಯಸ್ತಗೊಂಡಿದೆ. ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ವ್ಯಕ್ತಿಯೊಬ್ಬ ಕೊಚ್ಚಿ ಹೋಗಿದ್ದು, ಗ್ರಾಮಸ್ಥರು ಇದರಿಂದಾಗಿ ಆತಂಕಗೊಂಡಿದ್ದಾರೆ. ನೀರಿನ ರಭಸಕ್ಕೆ ವ್ಯಕ್ತಿಯೊಬ್ಬ ಹಳ್ಳದಲ್ಲಿ ಸಿಲುಕಿ ಕೆಲ ಕಾಲ ಪರದಾಡಿದ್ದಾನೆ. ಆನಂತರ ನೀರಿನ ರಭಸ ಹೆಚ್ಚಾಗಿದ್ದರಿಂದ ತೇಲಿ ಹೋಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ಪ್ರಜಾಕಿರಣ.ಕಾಮ್ ಗೆ ತಿಳಿಸಿದ್ದಾರೆ. ಮಡಿವಾಳಪ್ಪ ಜಕ್ಕನವರ ಎಂಬಾತನೇ ಜಾನುವಾರುಗಳನ್ನು ಮೇಯಿಸಲು ಹೋಗಿದ್ದ. ಈ ಸಂದರ್ಭದಲ್ಲಿ ನೀರಿನಲ್ಲಿ ತೇಲಿಹೋಗಿದ್ದಾನೆ. ಆತನನ್ನು ಹಗ್ಗದ ಸಹಾಯದಿಂದ […]