ಬೆಂಗಳೂರು prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಹೆಬ್ಬಳ್ಳಿ ಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣ ಕುರಿತಂತೆ ಸಿಬಿಐ ಅಧಿಕಾರಿಗಳ ತಂಡ ಮಾಜಿ ಸಚಿವರ ಹಲವು ಆಪ್ತರನ್ನು ವಿಚಾರಣೆಗೆ ಒಳಪಡಿಸಿದೆ. ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿರುವ ಸಿಬಿಐ ಕಚೇರಿಗೆ ಕರೆಸಿಕೊಂಡು ಹಲವು ಗಂಟೆಗಳ ಕಾಲ ವಿಚಾರಣೆಗೊಳಪಡಿಸಿ ಮಹತ್ವದ ಸಾಕ್ಷ್ಯ ಸಂಗ್ರಹಿಸಿದೆ ಎಂದು ತಿಳಿದುಬಂದಿದೆ. ವಿನಯಕುಲಕರ್ಣಿಯವರು ಸಚಿವರಾಗಿದ್ದ ವೇಳೆ ಆಪ್ತ ಕಾರ್ಯದರ್ಶಿಯಾಗಿದ್ದ ಕೆ ಎ ಎಸ್ ಅಧಿಕಾರಿ ಸೋಮು ನ್ಯಾಮಗೌಡರ ಅವರನ್ನು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. […]