ಯಾದಗಿರಿ prajakiran.com :
ಲಂಚ ಪಡೆಯುತ್ತಿದ್ದ ತಹಶೀಲ್ದಾರ್ ಎಸಿಬಿ ಬಲೆಗೆ ಬಿದ್ದ ಘಟನೆ ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ನಲ್ಲಿ ಸೋಮವಾರ ನಡೆದಿದೆ.
ಗುರುಮಠಕಲ್ ತಹಶೀಲ್ದಾರ್ ಸಂಗಮೇಶ ಜಿಡಗೆ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ.
ದೊಡ್ಡಬನ್ನಪ್ಪ ಅನ್ನೋರಿಂದ ಲಂಚ ಸ್ವೀಕರಿಸುತ್ತಿದ್ದ ತಹಶೀಲ್ದಾರ್ ಸಂಗಮೇಶ ಅವರು ಜಮೀನು ಪಾಲು ವಿಚಾರಕ್ಕೆ 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ.
ಅದಕ್ಕಾಗಿ ಮುಂಗಡವಾಗಿ 5 ಸಾವಿರ ರೂಪಾಯಿ ಹಣ ಪಡೆಯುವಾಗ ತಹಶೀಲ್ದಾರ್ ಸಿಕ್ಕಿ ಬಿದ್ದಿದ್ದಾರೆ.
ಎಸಿಬಿ ಎಸ್ ಪಿ ಮಹೇಶ್ ಮೇಘಣ್ಣವರ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ.
ಡಿವೈಎಸ್ ಪಿ ಉಮಾಶಂಕರ್, ಪಿಎಸ್ ಐ ಗುರುಪಾದ್ ಬಿರಾದಾರ್,
ಸಿಬ್ಬಂದಿ ಅಮರ್, ವಿಜಯ್, ಗುತ್ತಪ್ಪ
ದಾಳಿಯಲ್ಲಿ ಭಾಗಿಯಾಗಿದ್ದರು.