*ಕಾರ್ಮಿಕರ ಮೇಲಿನ ಶೋಷಣೆ ಖಂಡಿಸಿ ಪ್ರತಿಭಟನೆ*
ಧಾರವಾಡ prajakiran. com : ವೇತನ ಹೆಚ್ಚಳ ಮಾಡಬೇಕು ಕಾರ್ಮಿಕರ ಮೇಲಿನ ಶೋಷಣೆ ನಿಲ್ಲಬೇಕು ಎಂದು ಆಗ್ರಹಿಸಿ ಟಾಟಾ ಮಾರ್ಕೋಪೋಲೋ ಕಂಪನಿ ಕಾರ್ಮಿಕರು ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು.
ಧಾರವಾಡ ಟಾಟಾ ಮಾರ್ಕೋಪೋಲೋ ಕಂಪನಿಯಿಂದ ಮೆರವಣಿಗೆ ಮೂಲಕ ಧಾರವಾಡ ಜಿಲ್ಲಾಧಿಕಾರಿ ಕಚೇರಿಗೆ ಎಐಟಿಯುಸಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಕೈಗೊಂಡ ಟಾಟಾ ಮಾರ್ಕೋಪೋಲೋ ಕಂಪನಿ ಸಾವಿರಾರು ಕಾರ್ಮಿಕರು ಸರ್ಕಾರ ಹಾಗೂ ಟಾಟಾ ಮಾರ್ಕೋಪೋಲೋ ಆಡಳಿತ ಮಂಡಳಿ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಮಿಕರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಲೆ ಏರಿಕೆಗೆ ತಕ್ಕಂತೆ ವೇತನ ಹೆಚ್ಚಳಕ್ಕೆ ಎಚ್ಚೆತ್ತುಕೊಳ್ಳದ ಆಡಳಿತ ಮಂಡಳಿ ಹಾಗೂ ಸರ್ಕಾರ ಕಾರ್ಮಿಕರ ಹೋರಾಟವನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಟಾಟಾ ಮಾರ್ಕೋಪೋಲೋ ಕಂಪನಿ ಕಾರ್ಮಿಕರಿಗೆ ಕಳೆದ 39 ದಿನಗಳಿಂದ ಅನಧಿಕೃತ ಲಾಕ್ ಔಟ್ ಮಾಡಿ ದೌರ್ಜನ್ಯ ಎಸಗುತ್ತಿರುವುದು ಖಂಡನೀಯ ಎಂದು ಕಿಡಿಕಾರಿದರು