ರಾಜ್ಯ

ಜೈನರ “ಪವಿತ್ರ ಕ್ಷೇತ್ರ ಶಿಖರ್ಜಿ”ಯನ್ನು ಪ್ರವಾಸಿ ತಾಣವನ್ನಾಗಿ ಮಾಡದಿರುವ ಕೇಂದ್ರ ಸರಕಾರದ ತೀರ್ಮಾನಕ್ಕೆ ತವನಪ್ಪ ಅಷ್ಟಗಿ ಸ್ವಾಗತ

ಧಾರವಾಡ ಪ್ರಜಾಕಿರಣ. ಕಾಮ್ : ಜೈನಧರ್ಮದ “ಪವಿತ್ರ ಕ್ಷೇತ್ರ ಶಿಖರ್ಜಿಯನ್ನು ಪ್ರವಾಸಿ ತಾಣವನ್ನಾಗಿ ಮಾಡದಿರುವ ಕೇಂದ್ರ ಸರಕಾರದ ತೀರ್ಮಾನವನ್ನು ಕರ್ನಾಟಕ ಬಯಲು‌ ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ, ಬಿಜೆಪಿ ಮುಖಂಡ ತವನಪ್ಪ ಅಷ್ಟಗಿ ಸ್ವಾಗತಿಸಿದ್ದಾರೆ.

ಪರಿಶುದ್ಧ ಶಿಖರ್ಹಿ ಕ್ಷೇತ್ರವನ್ನು ಪ್ರವಾಸಿ ತಾಣ ಕೇಂದ್ರ ಮಾಡಲು ಕೇಂದ್ರ ಸರ್ಕಾರಕ್ಕೆ ಜಾರ್ಖಂಡ್ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿತ್ತು. ಪ್ರವಾಸಿ ತಾಣವನ್ನಾಗಿ ಮಾಡಿದರೆ ಜೈನರ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆಯಾಗಲಿದೆ.

ಪ್ರವಾಸಿ ತಾಣವಾಗುವುದರಿಂದ ಮೋಜು ಮಸ್ತಿಗೆ ಅವಕಾಶ ನೀಡಿದಂತಾಗುತ್ತದೆ.
ಇದರಿಂದ ಜೈನರ ಪವಿತ್ರ ಕ್ಷೇತ್ರ ಶಿಖರ್ಜಿಯ ಅಸ್ತಿತ್ವಕ್ಕೆ ಧಕ್ಕೆಯಾಗಲಿದೆ ಎಂಬ ಕಾರಣದಿಂದ ದೇಶಾದ್ಯಂತ ‌ಅಸಮಾಧಾನ ವ್ಯಕ್ತವಾಗಿತ್ತು.

ಅಲ್ಲದೇ, ಕ್ಷೇತ್ರದ ಉಳಿವಿಗಾಗಿ ದೇಶಾದ್ಯಂತ ಶಾಂತಿಯುತವಾಗಿ ಹೋರಾಟ, ಪ್ರತಿಭಟನೆಗಳು ಕೂಡ ನಡೆದಿದ್ದವು.

ಈ‌ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರಕಾರ ಶಿಖರ್ಜಿಯನ್ನು ಧಾರ್ಮಿಕ ಕ್ಷೇತ್ರವಾಗಿ ಉಳಿಸಲು ತೀರ್ಮಾನಿಸಿ ನಿರ್ಣಯ ಕೈಕೊಂಡಿರುವುದು ಸ್ವಾಗತಾರ್ಹ.

ಈ ಮೂಲಕ‌ ಜೈನ ಧರ್ಮೀಯರ ಭಾವನೆಗಳನ್ನು ಗೌರವಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ

ಸಚಿವ ಪ್ರಹ್ಲಾದ ಜೋಶಿ ಅವರಿಗೆ ಅಷ್ಟಗಿ ಕೃತಜ್ಞತೆ ಸಲ್ಲಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *