ಧಾರವಾಡ prajakiran.com : ಬೆಂಗಳೂರು ನಗರ ಹೊರತುಪಡಿಸಿ, ಇತರೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಸ್.ಎ.ಎಸ್. ತೆರಿಗೆ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡಿದ್ದು ಅವೈಜ್ಞಾನಿಕ ಮತ್ತು ಜನ ವಿರೋಧಿ ಎಂದು ಸಾಮಾಜಿಕ ಕಾರ್ಯಕರ್ತ ನಾಗರಾಜ ಹೊಂಗಲ್ ಹಾಗೂ
ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್.ನೀರಲಕೇರಿ ತೀವ್ರವಾಗಿ ಖಂಡಿಸಿದರು.
ಅವರು ನಗರದಲ್ಲಿ
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ
ಯಾವ ವಿಷಯಕ್ಕೆ ಸುಗ್ರೀವಾಜ್ಞೆ ಜಾರಿಗೆ ತರಬೇಕು ಎಂಬ ಪರಿಕಲ್ಪನೆ ಕೂಡ ಇಲ್ಲದಿರುವುದು ನೀವಿನ ಸಂಗತಿ ಎಂದರು.
ಸಂದಿಗ್ಧ ಸಂದರ್ಭದಲ್ಲಿ ಮಾತ್ರ ರಾಜ್ಯಪಾಲರ ಅನುಮತಿ ಮೇರೆಗೆ ಸುಗ್ರಿವಾಜ್ಞೆ ಜಾರಿಗೆ ತರಬೇಕು ಎಂಬ ನಿಯಮವಿದೆ. ಆದರೆ, ಆಸ್ತಿ ತೆರಿಗೆ ಹೆಚ್ಚಳಕ್ಕೂ ಸುಗ್ರೀವಾಜ್ಞೆ ಜಾರಿಗೆ ತಂದಿರುವುದು ದುರಂತದ ಸಂಗತಿಯಾಗಿದೆ ಎಂದರು.
ಪ್ರತಿ ವರ್ಷಕ್ಕೆ ತೆರಿಗೆ ಹೆಚ್ಚಳ ಆಗುತ್ತದೆ. ಎಸ್.ಆರ್. ದರ ಎಂಬ ಪರಿಕಲ್ಪನೆ ತಪ್ಪಿದೆ.
ಪಕ್ಷಾತೀತವಾಗಿ ಜನಪ್ರತಿನಿಧಿಗಳು ಒಗ್ಗೂಡಿ ಜನರಿಗೆ ಹೊರೆ ಉಂಟು ಮಾಡುವ ಹುನ್ನಾರ ಇದಾಗಿದೆ ಎಂದು ಆರೋಪಿಸಿದರು.
ತಕ್ಷಣವೇ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ವಾಪಸ್ ಪಡೆಯಬೇಕು. ಇಲ್ಲವಾದರೆ, ಜನಾಂದೋಲನ ರೂಪಿಸುವುದಾಗಿ ಎಚ್ಚರಿಕೆ ನೀಡಿದರು.
ಸರ್ಕಾರದ ಈ ತಾರತಮ್ಯ ನೀತಿ ಸರಿಯಲ್ಲ. ತೆರಿಗೆ ವ್ಯವಸ್ಥೆ ಜನಸ್ನೇಹಿಯಾಗಿರಬೇಕು. ಆದರೆ, ಜನರಿಗೆ ಹೊರೆ ಮಾಡುವ ಕೆಲಸ ಆಗಬಾರದು. ಈ ರೀತಿ ತೆರಿಗೆ ಹೆಚ್ಚಳ ಭ್ರಷ್ಟಾಚಾರಕ್ಕೆ ಎಡೆ ಮಾಡಲಿದೆ.
ಎಲ್ಲದಕ್ಕೂ ಸುಗ್ರೀವಾಜ್ಞೆ ಜಾರಿಗೆ ಮಾಡಿದರೆ ಕೌನ್ಸಿಲ್, ಅಸಂಬ್ಲಿ ಇರುವುದು ಏಕೆ? ಎಂದು ತರಾಟೆಗೆ ತೆಗೆದುಕೊಂಡರು.
15 ವರ್ಷಗಳಿಂದ ಜಾರಿಯಲ್ಲಿ ಇರುವ ಚಾಲ್ತಿ ಆಸ್ತಿ ತೆರಿಗೆ ಪದ್ಧತಿಯನ್ನು ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ಇಲಾಖೆಯ ಅಧಿಕಾರಿಗಳಿಗೇ ಇಂದಿಗೂ ಅರ್ಥವಾಗಿಲ್ಲ. ಈ ಸಂಕಿರ್ಣ ವ್ಯವಸ್ಥೆಯಲ್ಲಿ ಪ್ರತಿ ವರ್ಷ ಶೇ. 3ರಿಂದ 5ರಷ್ಟು ಆಸ್ತಿ ತೆರಿಗೆ ಹೆಚ್ಚಳ ಖಂಡನೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಬಿಜೆಪಿ ಸರ್ಕಾರ ಸುಗ್ರೀವಾಜ್ಞೆಯನ್ನು ಬೇಸರತ್ ಆಗಿ ಹಿಂದಕ್ಕೆ ಪಡೆಯಬೇಕು ಎಂದು
ಸಾಮಾಜಿಕ ಕಾರ್ಯಕರ್ತ ನಾಗರಾಜ ಹೊಂಗಲ್ ಹಾಗೂ
ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್.ನೀರಲಕೇರಿ
ಆಗ್ರಹ ಮಾಡಿದರು.