ರಾಜ್ಯ

ಚುನಾವಣಾ ತರಬೇತಿ ಮುಗಿಸಿ, ಮನೆಗೆ ಹೋಗುವಾಗ ಶಿಕ್ಷಕ ಸಾವು….!

ಧಾರವಾಡ ಪ್ರಜಾಕಿರಣ.ಕಾಮ್  ಮೇ.02: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮತಗಟ್ಟೆ ಅಧಿಕಾರಿಗಳ ತರಬೇತಿಯಲ್ಲಿದ್ದ ಕುಂದಗೋಳ ಪಟ್ಟಣದ ಹರಭಟ್ಟ ಪ್ರಾಥಮಿಕ ಶಾಲೆಯ ಶಿಕ್ಷಕ ಮಲ್ಲಪ್ಪ ಭೀಮಪ್ಪ ಸೋನಾರ (54) ಅವರು ಮಂಗಳವಾರ ಮಧ್ಯಾಹ್ನ ನಿಧನರಾಗಿದ್ದಾರೆ.

ಜೆಎಸ್ಎಸ್ ಕಾಲೇಜಿನಲ್ಲಿ ಇಂದು 71-ಧಾರವಾಡ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಮತಗಟ್ಟೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲು ನಿಯೋಜಿತರಾದ ಅಧಿಕಾರಿ, ಸಿಬ್ಬಂದಿಗಳಿಗೆ ತರಬೇತಿ ಆಯೋಜಿಸಲಾಗಿತ್ತು.

ಈ ತರಬೇತಿಯಲ್ಲಿ ಭಾಗವಹಿಸಿದ್ದ ಮತಗಟ್ಟೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲು ನೇಮಕಗೊಂಡಿದ್ದ ಶಿಕ್ಷಕ ಮಲ್ಲಪ್ಪ ಭೀಮಪ್ಪ ಸೋನಾರ ಅವರು ಮಧ್ಯಾಹ್ನದ ನಂತರ ತರಬೇತಿ ಮುಗಿಸಿ, ಮೆಟ್ಟಿಲು ಇಳಿದು ಮನೆಗೆ ಹೋಗುವಾಗ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಅವರಿಗೆ ಪತ್ನಿ, ಇಬ್ಬರು ಗಂಡುಮಕ್ಕಳಿದ್ದಾರೆ. ಶಿಕ್ಷಕ ಸೋನಾರ ಅವರ ಆಕಸ್ಮಿಕ ಸಾವಿಗೆ ಶೋಕ ವ್ಯಕ್ತಪಡಿಸಿರುವ ಜಿಲ್ಲಾ ಚುನಾವಣಾಧಿಕಾರಿಗಳು, ಮೃತರ ಕುಟುಂಬಕ್ಕೆ ಸರಕಾರದಿಂದ ಸೀಗುವ ಎಲ್ಲ ನೆರವು ತಲುಪಿಸಲಾಗುವುದೆಂದು  ಎಂದು ಚುನಾವಣಾಧಿಕಾರಿಗಳು  ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *