ಹುಬ್ಬಳ್ಳಿ prajakiran.com : ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಅ.1 ರಂದು 2020-21 ನೇ ಸಾಲಿನ ದಸರಾ ರಜೆ ರದ್ದುಗೊಳಿಸಿ ಆದೇಶ ಮಾಡಿ ವಿದ್ಯಾಗಮ ಕಾರ್ಯಕ್ರಮ ಮುಂದುವರೆಸುವಂತೆ ಆದೇಶಿಸಿದ್ದಾರೆ.
ಆದರೆ ಈ ಆದೇಶವು ಕೆ ಸಿ ಎಸ್ ಆರ್ ನಿಯಮಾವಳಿಗಳಿಗೆ ತದ್ವಿರುದ್ದವಾಗಿದೆ ಶಿಕ್ಷಕರು ರಜೆ ಸಹಿತ ನೌಕರರ ವೃಂದದಲ್ಲಿ ಕೆಲಸ ನಿರ್ವಹಿಸುವ ಸರ್ಕಾರಿ ನೌಕರರಿಗೆ ತೊಂದರೆಯಾಗಲಿದೆ ಎಂದು ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯ ಘಟಕ ಹುಬ್ಬಳ್ಳಿಆಪಾದಿಸಿದೆ.
ರಾಜ್ಯದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗದ ವ್ಯಾಪಕ ಹರುಡುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ರಜೆ ನೀಡಿದ್ದರು.
ಸರ್ಕಾರದ ಆದೇಶದ ಪ್ರಕಾರ ಎಲ್ಲ ಶಿಕ್ಷಕರು ಜೂನ 5 ರಿಂದ ನಿರಂತರ ಶಾಲೆಗಳಿಗೆ ಹಾಜರಾಗಿ ಮಕ್ಕಳ ಮನೆಗೆ ಭೇಟಿ ನೀಡಿ ಶೈಕ್ಷಣಿಕ ಚಟುವಟಿಕೆಗಳ ನಿರಂತರತೆ ಕಾಪಾಡುವ ನಿಟ್ಟಿನಲ್ಲಿ ವಿದ್ಯಾಗಮ ಕಾರ್ಯಕ್ರಮದ ಅನುಷ್ಠಾನ ಮಾಡುತ್ತಾ ಬಂದಿದ್ದಾರೆ.
ಇದಕ್ಕೂ ಮೊದಲು ಕೋವಿಡ್ ವಾರಿಯರ್ಸ್ ಆಗಿ ಬೇಸಿಗೆ ರಜೆಯಲ್ಲಿ ಕೆಲಸ ನಿರ್ವಹಿಸಿದ್ದಾರೆ. ಈಗ ದಸರಾ ರಜೆಯಲ್ಲಿಯೂ ಇದನ್ನೆ ಮುಂದುವರೆಸಿದರೆ ಕಾನೂನಿನ ಪ್ರಕಾರ ಹಾಗೂ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ದೃಷ್ಟಿಯಿಂದ ಶಿಕ್ಷಕರಿಗೆ ಮತ್ತು ಮಕ್ಕಳಿಗೆ ತೊಂದರೆಯಾಗುತ್ತದೆ.
ನಾಡ ಹಬ್ಬದ ಔಚಿತ್ಯ ಹಾಗೂ ಪ್ರಾಮುಖ್ಯತೆ ಮಕ್ಕಳು ಅರಿಯಲಿ ಎಂಬ ಮೂಲ ಉದ್ದೇಶದ ಮೇರೆಗೆ ನೀಡಲಾಗುತ್ತಿದ್ದ ದಸರಾ ರಜೆ ರದ್ದುಗೊಳಿಸಿ ಆದೇಶ ಮಾಡಿರುವುದು ಅತ್ಯಂತ ಖಂಡನಾರ್ಹ ಬೆಳವಣಿಗೆ ಆಗಿದೆ ಎಂದು ಬೇಸರ ಹೊರಹಾಕಿದ್ದಾರೆ.
ಆದ್ದರಿಂದ ಈ ಆದೇಶವನ್ಪು ಪುನರ್ ಪರಿಶೀಲಿಸುವಂತೆ ಹಾಗೂ ಈ ಹಿಂದಿನಂತೆಯೇ ದಸರಾ ರಜೆ ಮಂಜೂರು ಮಾಡುವ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದಾರೆ.