ರಾಜ್ಯ

ರಾಜ್ಯದ ಶಿಕ್ಷಕರ, ಉಪನ್ಯಾಸಕರ ವೇತನ ಪರಿಷ್ಕರಣೆಗಾಗಿ ಪ್ರತ್ಯೇಕ ವೇತನ ಆಯೋಗ ರಚಿಸಿ : ಬಸವರಾಜ ಗುರಿಕಾರ

ಬಜೆಟ್–ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹ
ಧಾರವಾಡ prajakiran.com : ರಾಜ್ಯ ಆಯವ್ಯಯ ( ಬಜೆಟ್ ) ಮಂಡನೆಯ ಸಂಧರ್ಭದಲ್ಲಿ ರಾಜ್ಯದ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಶಿಕ್ಷಕರ ಉಪನ್ಯಾಸಕರ ಕ್ರಿಯಾ ಸಮಿತಿ ಅಧ್ಯಕ್ಷರು ಹಾಗೂ ನವದೆಹಲಿಯ
ಅಖಿಲ ಭಾರತ ಶಿಕ್ಷಕರ ಫೆಡರೇಷನ ಕಾರ್ಯಾಧ್ಯಕ್ಷ ಬಸವರಾಜ ಗುರಿಕಾರ ಆಗ್ರಹಿಸಿದ್ದಾರೆ.

ಈ ಕುರಿತು ರಾಜ್ಯದ ಮುಖ್ಯಮಂತ್ರಿಗೆ  ಪತ್ರ ಬರೆದಿರುವ ಅವರು, ರಾಜ್ಯದ ಶಿಕ್ಷಕರ , ಉಪನ್ಯಾಸಕರ ವೇತನ ಭತ್ಯೆಗಳ ಪರಿಷ್ಕರಣೆಗಾಗಿ ಪ್ರತ್ಯೇಕ ವೇತನ ಆಯೋಗ ರಚಿಸಬೇಕು.

ಹಾಗೂ ರಾಜಸ್ತಾನ ಸರಕಾರ ರಾಜ್ಯ ಬಜೆಟ್ ಮಂಡನೆ ಸಂಧರ್ಭದಲ್ಲಿ ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದೆ.

ತಾವು ಸಹ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ ಬಜೆಟ್ ಮಂಡನೆ ಸಂಧರ್ಭದಲ್ಲಿ ಘೋಷಣೆ ಮಾಡಬೇಕೆಂದು ವಿನಂತಿಸಿದ್ದಾರೆ.

1995 ರ ನಂತರ ಪ್ರಾರಂಭವಾದ ಅನುದಾನ ರಹಿತ ಎಲ್ಲ ಶಾಲೆ , ಕಾಲೇಜು , ವೃತ್ತಿ ತರಬೇತಿ ಸಂಸ್ಥೆಗಳನ್ನು ತಕ್ಷಣ ಅನುದಾನಕ್ಕೆ ಒಳಪಡಿಸಿ , ಅನುದಾನ ರಹಿತ ಶಾಲೆ , ಕಾಲೇಜ್ ಶಿಕ್ಷಕರು ನೆಮ್ಮದಿಯಿಂದ ಜೀವನ ನಿರ್ವಹಣೆ ಮಾಡಲು ಅವಕಾಶ ಕಲ್ಪಿಸಬೇಕಾಗಿ ಕೋರಿದ್ದಾರೆ.

ಅನುದಾನಿತ, ಅನುದಾನ ರಹಿತ ಶಾಲೆ , ಕಾಲೇಜು , ವೃತ್ತಿ ತರಬೇತಿ ಸಂಸ್ಥೆಗಳಲ್ಲಿ ಕಾರನಿರ್ವಹಿಸುತ್ತಿರುವ ಶಿಕ್ಷಕರುಗಳಿಗೆ ಪಿಂಚಣಿ ಸೌಲಭ್ಯ ಹಾಗೂ ವೈದ್ಯಕೀಯ ಸೌಲಭ್ಯ ಒದಗಿಸಬೇಕೆಂದಿದ್ದಾರೆ.

ಕಾಲ್ಪನಿಕ ವೇತನ ಬಡ್ತಿ ಸಮಸ್ಯೆ ಇನ್ನೂ ಬಗೆಹರಿಯದೆ ಇರುವದರಿಂದ ನಿವೃತ್ತಿಯಾಗುವ ಶಿಕ್ಷಕರುಗಳಿಗೆ ತೊಂದರೆಯಾಗಿದೆ.

ತಕ್ಷಣ ಈ ಸಮಸ್ಯೆ ಬಗೆಹರಿಸಬೇಕಾಗಿ ವಿನಂತಿ . ಸರಕಾರಿ ಶಿಕ್ಷಕರುಗಳಿಗೆ ಸಿಗುವ ಎಲ್ಲ ಸೌಲಭ್ಯಗಳನ್ನು ಖಾಸಗಿ ಕ್ಷೇತ್ರದಲ್ಲಿ ಕಾವ್ಯ ಮಾಡುವ ಶಿಕ್ಷಕರುಗಳಿಗೆ ಯಥಾವತ್ತಾಗಿ ಮಂಜೂರ ಮಾಡಬೇಕು ಎಂದು  ಬಸವರಾಜ ಗುರಿಕಾರ ಆಗ್ರಹಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *