ಹುಬ್ಬಳ್ಳಿ prajakiran.com : ರಾಜ್ಯ ಸರಕಾರ ಪ್ರಸಕ್ತ ಶೈಕ್ಷಣಿಕ ವರ್ಷ 2020-2021ರ ಸಾಲಿಗೆ ಜಾರಿಗೆ ತರಲು ಹೊರಟಿರುವ ಶಿಕ್ಷಕರ ವರ್ಗಾವಣೆ ನಿಯಮಕ್ಕೆ ಕರ್ನಾಟಕ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ರಾಜ್ಯಾದ್ಯಂತ 8 ಸಾವಿರಕ್ಕೂ ಅಧಿಕ ಶಿಕ್ಷಕರು ಆಕ್ಷೇಪಣೆಗಳನ್ನು ಸಲ್ಲಿಸಿದ್ದಾರೆ. ಹೀಗಾಗಿ ಅವುಗಳನ್ನು ಕ್ರೂಢಿಕರಿಸಿ ಸರಕಾರ ಹಾಗೂ ಶಿಕ್ಷಣ ಇಲಾಖೆ ಆದ್ಯತೆಯಲ್ಲಿ ಪರಿಗಣಿಸಿ ವರ್ಗಾವಣೆ ಅಪೇಕ್ಷಿತರಿಗೆ ಅನುಕೂಲವಾಗುವಂತೆ ನಿಯಮಗಳನ್ನು ತಿದ್ದುಪಡಿ ಮಾಡಬೇಕು ಎಂದು ರಾಜ್ಯ ಸರಕಾರದ ಪ್ರಧಾನ ಕಾರ್ಯದರ್ಶಿಗೆ ಮನವಿ ಪತ್ರ ಸಲ್ಲಿಸಲಾಗಿದೆ.
ಹೀಗಾಗಿ ಪ್ರಸ್ತುತ ವರ್ಷದ ಶಾಲೆಗಳು ಆರಂಭವಾಗುವ ಮುನ್ನವೇ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮುಗಿಸಬೇಕು ಎಂದು ಸಂಘದ ರಾಜ್ಯಾಧ್ಯಕ್ಷಅಶೋಕ ಸಜ್ಜನ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಉಪ್ಪಿನ, ಗೌರವಾಧ್ಯಕ್ಷ ಎಲ್ಐ ಲಕ್ಕಮ್ಮನವರ, ಕಾರ್ಯಾಧ್ಯಕ್ಷ ಶರಣಪ್ಪಗೌಡ್ರ, ಕೋಶಾಧ್ಯಕ್ಷ ಎಸ್ ಎಫ್ ಪಾಟೀಲ, ಉಪಾಧ್ಯಕ್ಷರಾದ ಎಂ.ವಿ. ಕುಸುಮಾ, ಮಹ್ಮದ ರಫಿ, ರಾಜಶ್ರೀ ಪ್ರಭಾಕರ ಒತ್ತಾಯಿಸಿದ್ದಾರೆ.