ಧಾರವಾಡ prajakiran.com: ಇಲ್ಲಿನ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೆಲ ತಿಂಗಳ ಹಿಂದೆ ನಡೆದಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಯನ್ನು ವಿದ್ಯಾಗಿರಿ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ವಿಜಯಪುರ ಜಿಲ್ಲೆ ಬೆಳ್ಳುಬ್ಬಿ ಗ್ರಾಮದ ಅಜಿತ್ ಭೀಮಪ್ಪ ಚಲವಾದಿ (25) ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ 2.50 ಲಕ್ಷ ರೂ. ಮೌಲ್ಯದ 50 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
ಇಲ್ಲಿನ ಕವಿವಿ ರಸ್ತೆಯಲ್ಲಿನ ಅಪಾರ್ಟ್ಮೆಂಟ್ನಲ್ಲಿನ ಮನೆಯೊಂದರಲ್ಲಿ ನವೆಂಬರ್ ತಿಂಗಳಲ್ಲಿ ಕಳ್ಳತನ ನಡೆಸಿದ್ದ ಈ ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದ ಪೊಲೀಸರು, ಕೆಎಂಎಫ್ ಬಳಿ ಶುಕ್ರವಾರ ಬಂಧಿಸಿದ್ದಾರೆ. ಬಂಧಿತನನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಆಯುಕ್ತ ಲಾಬುರಾಮ್, ಉಪ ಪೊಲೀಸ್ ಆಯುಕ್ತರಾದ ಕೆ. ರಾಮರಾಜನ್, ಆರ್.ಬಿ. ಬಸರಗಿ ಮಾರ್ಗದರ್ಶನದಲ್ಲಿ ಎಸಿಪಿ ಜಿ. ಅನುಷಾ ನೇತೃತ್ವದಲ್ಲಿ ವಿದ್ಯಾಗಿರಿ ಠಾಣೆ ಇನ್ಸ್ಪೆಕ್ಟರ್ ಎಂ.ಕೆ. ಬಸಾಪುರ, ಪಿಎಸ್ಐ ಸಚಿನಕುಮಾರ ದಾಸರಡ್ಡಿ, ಎಸ್.ಆರ್. ತೇಗೂರ, ಎಎಸ್ಐ ಬಿ.ಎಂ. ಅಂಗಡಿ, ಎ.ಬಿ. ನರೇಂದ್ರ, ಎಂ.ಎಫ್. ನದಾಫ, ಐ.ಪಿ. ಬುರ್ಜಿ, ಆರ್.ಕೆ. ಅತ್ತಾರ, ಎಂ.ಸಿ. ಮಂಕಣಿ, ಬಿ.ಎಂ. ಪಠಾತ, ಎಂ.ಜಿ. ಪಾಟೀಲ, ಡಿ.ಎಸ್. ಸಾಂಗ್ಲೀಕರ, ಎ.ಎಂ. ಹುಯಿಲಗೋಳ, ಎಚ್.ಕೆ. ನಾಯ್ಕರ, ಬಸವರಾಜ ಸವಣೂರ ಅವರ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.