ಜಮ್ಮು&ಕಾಶ್ಮೀರ prajakiran.com : ಇಲ್ಲಿನ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರ ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.
ಜಿಲ್ಲೆಯ ವೈಲೂರಿನಲ್ಲಿ ಉಗ್ರರು ಅಡಗಿರುವುದರ ಬಗ್ಗೆ ಮಾಹಿತಿ ದೊರೆತ ಭದ್ರತಾ ಪಡೆ, ಇಂದು ಬೆಳಗ್ಗೆ ಎನ್ ಕೌಂಟರ್ ಆರಂಭಿಸಿತು.
ಈ ವೇಳೆ ಮೂವರು ಉಗ್ರರನ್ನು ಸದೆಬಡಿಯಲಾಗಿದೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.
ಎನ್ ಕೌಂಟರ್ ನಡೆದ ಸ್ಥಳದಲ್ಲಿ ಶೋಧ ಕಾರ್ಯ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.