ಏಮ್ಸ್ ಮುಖ್ಯಸ್ಥ ಗುಲೇರಿಯಾ ಹೇಳಿಕೆ
ನವದೆಹಲಿ prajakiran.com : ಭಾರತಕ್ಕೆ ಕೋವಿಡ್ ಮೂರನೇ ಅಲೇಯು ಮುಂದಿನ 6 ರಿಂದ 8 ವಾರಗಳಲ್ಲಿ ಆರಂಭವಾಗುವ ಸಾಧ್ಯತೆ ಇದೆ ಎಂದು ನವದೆಹಲಿ ಏಮ್ಸ್ ಮುಖ್ಯಸ್ಥ ರಣದೀಪ್ ಗುಲೇರಿಯಾ ಹೇಳಿದ್ದಾರೆ.
ಭಾರತದಲ್ಲಿ ಕೊರೋನಾ ಮೂರನೇ ಅಲೆ ಸಂಭವಿಸುವುದನ್ನು ತಡೆಯಲಾಗದು, ಆದರೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಸಾಕಷ್ಟು ಪ್ರಮಾಣದಲ್ಲಿ ನಿಯಂತ್ರಿಸಬಹುದು.
ಮುಂದಿನ ಆರರಿಂದ ಎಂಟು ವಾರಗಳಲ್ಲಿ ಅದು ದೇಶಕ್ಕೆ ಅಪ್ಪಳಿಸಬಹುದು ಎಂದು ತಿಳಿಸಿದ್ದಾರೆ.
ಅನ್ ಲಾಕ್ ಮಾಡಲು ಪ್ರಾರಂಭಿಸುತ್ತಿದ್ದಂತೆಯೇ ಕೆಲವು ಕಡೆ ಕೋವಿಡ್ ನಿಯಮಗಳನ್ನು ಅನುಸುತ್ತಿಲ್ಲ. .
ಮೊದಲ ಮತ್ತು ಎರಡನೇ ಅಲೆಯ ನಡುವೆ ಏನಾಯಿತು ಎಂದು ನಾವು ಪಾಠ ಕಲಿತಿದ್ದೇವೆ. ಆದರೂ ಸಹ ಜನ ಎಚ್ಚೆತ್ತುಕೊಂಡಿಲ್ಲ ಎಂದರು.
ಕೋವಿಡ್ ನಿಯಮಗಳನ್ನು ಪಾಲಿಸುವ ಮತ್ತು ಜನಸಂದಣಿಯನ್ನು ತಡೆಗಟ್ಟುವ ವಿಷಯದಲ್ಲಿ ನಾವು ಹೇಗೆ ಮುಂದುವರಿಯುತ್ತೇವೆ ಎಂಬುದರ ಮೇಲೆ ಎಲ್ಲವೂ ಅವಲಂಬಿತವಾಗಿದೆ.
ಮೂರನೇ ಅಲೇ ವೇಗವಾಗಿ ಹರಡುವ ಸಾಧ್ಯತೆ ಇದೆ ಎಂದು ಗಲೇರಿಯಾ ಎಚ್ಚರಿಸಿದ್ದಾರೆ.