ಧಾರವಾಡ prajakiran. com :
ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ
ಬೈಕ್ ಮೇಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡದ ರಾಷ್ಟ್ರೀಯ ಹೆದ್ದಾರಿ ನಂ. 4ರಲ್ಲಿರುವ ವೆಂಕಟಾಪುರ ಬಳಿ ರವಿವಾರ ರಾತ್ರಿ ಸಂಭವಿಸಿದೆ.
ಮೃತರಾದವರನ್ನು ಸುಶೀಲವ್ವ ಹರಿಜನ (40), ಕಲ್ಲವ್ವ ಹರಿಜನ(42), ರಾಜು (36) ಎಂದು ಗುರುತಿಸಲಾಗಿದೆ.
ಸುಶೀಲವ್ವ ಮತ್ತು ಕಲ್ಲವ್ವ ಭೋಗೂರ ಗ್ರಾಮದವರು ಎಂದು ಗೊತ್ತಾಗಿದೆ.
ರಾಜು, ತಿಗಡೊಳ್ಳಿ ಗ್ರಾಮದ ನಿವಾಸಿಯಾಗಿದ್ದಾನೆ.
ಧಾರವಾಡಕ್ಕೆ ನೇರಳೆ ಹಣ್ಣು ಮಾರಲು ಬಂದಿದ್ದ ಮೂವರು ಈ ರೀತಿಯಲ್ಲಿ ದುರಂತ ಅಂತ್ಯ ಕಂಡಿದ್ದಾರೆ.
ಅಪಘಾತ ಸಂಭವಿಸಿದ ನಂತರ
ಕಾರಿನಲ್ಲಿದ್ದವರು ಕಾರು ಬಿಟ್ಟರು ಪರಾರಿಯಾಗಿದ್ದಾರೆ.
ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ದೌಡಾಯಿಸಿದ ಧಾರವಾಡದ
ಗರಗ ಠಾಣೆ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.