ರಾಜ್ಯ

ಧಾರವಾಡದಲ್ಲಿ ಚುನಾವಣೆ ಕರ್ತವ್ಯಲೋಪ ತೋರಿದ ಮೂವರ ಅಮಾನತು

ಧಾರವಾಡ prajakiran.com : ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯಲೋಪ ಮಾಡಿದ ಮೂವರನ್ನು ಅಮಾನತುಗೊಳಿಸಲಾಗಿದೆ.

ಈ ಕುರಿತು ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ
ಸಹಾಯಕ ಚುನಾವಣಾಧಿಕಾರಿಗಳು
ಹಾಗೂ ಧಾರವಾಡ ಜಿಲ್ಲಾಧಿಕಾರಿಗಳು ಆಗಿರುವ
ನಿತೇಶ್ ಕೆ . ಪಾಟೀಲ ಆದೇಶ ಹೊರಡಿಸಿದ್ದಾರೆ.

ವಿ. ಎಂ ಸಾಳುಂಕೆ , ಶಿರಸ್ತೇದಾರರು , ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ , ಧಾರವಾಡ, ಜಿ ಬಿ ಚಂದನಕರ , ದ್ವಿ.ದ.ಸ. ತಹಶೀಲದಾರ ಕಚೇರಿ , ಧಾರವಾಡ ಹಾಗೂ ಅಡಿವೇಶ ಪರ್ವತಿ , ದ್ವಿ.ದ.ಸ. ತಹಶೀಲದಾರ ಕಚೇರಿ , ಧಾರವಾಡ ಅಮಾನತು ಗೊಂಡವರು.

ಇವರು
ಮತಗಟ್ಟೆ ಸಿಬ್ಬಂದಿಗಳಿಗೆ ಪೂರೈಸಿದ ಚುನಾವಣಾ ಸಾಮಾಗ್ರಿಗಳ ವಿತರಣೆಯನ್ನು ಸಮರ್ಪಕವಾಗಿ ನಿರ್ವಹಿಸದೆ ಚುನಾವಣಾ ಕಾರ್ಯದಲ್ಲಿ ನಿರ್ಲಕ್ಷವಹಿಸಿ ಕರ್ತವ್ಯಲೋಪ ಮಾಡಿ , ಚುನಾವಣೆ ಕಾರ್ಯಕ್ಕೆ ತೊಂದರೆಯುಂಟು ಮಾಡಿದ ಆರೋಪ ಎದುರಿಸುತ್ತಿದ್ದಾರೆ.

ಹೀಗಾಗಿ ಪ್ರಜಾ ಪ್ರಾತಿನಿಧ್ಯ ಕಾಯ್ದೆ , 1951 ರ ಕಲಂ 134 ಉಲ್ಲಂಘನೆ ಮಾಡಿದ್ದರಿಂದ ಈ ಮೇಲೆ ಸೂಚಿಸಿದ ಸಿಬ್ಬಂದಿಗಳನ್ನು ಪ್ರಜಾ ಪ್ರಾತಿನಿಧ್ಯ ಕಾಯ್ದೆ , 1951 ರ ಕಲಂ 28 ( ಎ ) ರಡಿ ಪ್ರದತ್ತವಾದ ಅಧಿಕಾರದಂತೆ , ಹಾಗೂ ಕರ್ನಾಟಕ ನಾಗರೀಕ ಸೇವಾ ( ವರ್ಗಿಕರಣ , ನಿಯಂತ್ರಣ ಮತ್ತು ಮೇಲ್ಮನವಿ ) ನಿಯಮಾವಳಿಗಳು , 1957 ರ . ನಿಯಮ 19 ( 1 ) ( ಎ ) ನೇದ್ದರ ಪ್ರಕಾರ ಇಲಾಖಾ ವಿಚಾರಣೆ ಬಾಕಿ ಇರಿಸಿ , ಸರಕಾರಿ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಗೊಳಿಸಿ ಆದೇಶಿಸಿದೆ .

ಸದರ ನೌಕರರು ಅಮಾನತು ಅವಧಿಯಲ್ಲಿ ತಮ್ಮ ಕಾರ್ಯಾಲಯದ ಮುಖ್ಯಸ್ಥರ ಪಡೆಯದೇ ಕೇಂದ್ರಸ್ಥಾನ ಬಿಡತಕ್ಕದ್ದಲ್ಲ ಎಂದು ಸೂಚಿಸಲಾಗಿದೆ ‌

ಸದರ ನೌಕರರು ಅಮಾನತ್ತಿನ ಅವಧಿಯಲ್ಲಿ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳು , 1958 ರ ನಿಯಮ 98 ರ ಪ್ರಕಾರ ಜೀವನಾಂಶ ಭತ್ಯೆ ಪಡೆಯಲು ಅರ್ಹರಿರುತ್ತಾರೆ ಎಂದು ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ
ಸಹಾಯಕ ಚುನಾವಣಾಧಿಕಾರಿಗಳು
ಹಾಗೂ ಧಾರವಾಡ ಜಿಲ್ಲಾಧಿಕಾರಿಗಳು ಆಗಿರುವ
ನಿತೇಶ್ ಕೆ . ಪಾಟೀಲ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *