ಬೆಂಗಳೂರು prajakiran.com : ರಾಜ್ಯದಲ್ಲಿ ಮಂಗಳವಾರ ಒಂದೇ ದಿನ 100 ಪ್ರಕರಣ ಪತ್ತೆಯಾಗಿವೆ. ಆ ಮೂಲಕ ರಾಜ್ಯದ ಸೋಂಕಿತರ ಸಂಖ್ಯೆ 2282ಕ್ಕೆ ಏರಿಕೆ ಆಗಿದೆ.
ಈವರೆಗೆ ರಾಜ್ಯದ ವಿವಿಧ ಜಿಲ್ಲೆಯಲ್ಲಿ 44 ಜನ ಮಂದಿ ಬಲಿಯಾಗಿದ್ದಾರೆ. ಗುಣಮುಖರಾಗುವವರ ಸಂಖ್ಯೆಯೂ ಹೆಚ್ಚುತ್ತಲೇ ಇದೆ.
ಇವತ್ತು ಒಂದೇ ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 17 ಜನ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕೋಟೆ ನಾಡು ಚಿತ್ರದುರ್ಗದಲ್ಲಿ ಇವತ್ತು ಒಂದೇ ದಿನ 20 ಸೋಂಕಿತರು ಪತ್ತೆಯಾಗಿದ್ದಾರೆ. ಇವರೆಲ್ಲರೂ ತಮಿಳುನಾಡಿನಿಂದ ಬಂದವರಾಗಿದ್ದಾರೆ. ಇವರಿಗೆ ನಿಗದಿತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅದೇ ರೀತಿ ಹಾಸನ ಜಿಲ್ಲೆಯ 13 ಪ್ರಕರಣಗಳು ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಅವರಿಗೆ ಹಾಸನದ ನಿಗದಿತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ 13 ಜನರು ಜಾರ್ಖಂಡ ರಾಜ್ಯದಿಂದ ಬಂದವರಾಗಿದ್ದು, ಅವರಿಗೆ ಬಿಮ್ಸ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೀದರ 10, ಯಾದಗಿರಿ 14 ಸೋಂಕಿತರು ಮಹಾರಾಷ್ಟ್ರ ನಂಟು ಹೊಂದಿದ್ದಾರೆ. ಇವತ್ತು ಬೆಣ್ಣೆನಗರಿ ದಾವಣಗೆರೆ ಜಿಲ್ಲೆಯಲ್ಲಿ 11, ರಾಜ್ಯದ ರಾಜಧಾನಿ ಬೆಂಗಳೂರು 2, ಉಡುಪಿ 3, ಬಳ್ಳಾರಿ 1, ಕೊಪ್ಪಳ 1, ಚಿಕ್ಕಬಳ್ಳಾಪುರ 1, ವಿಜಯಪುರ 5, ದಕ್ಷಿಣ ಕನ್ನಡ 3, ಬಾಗಲಕೋಟೆ 1, ಕೋಲಾರ 2 ಪ್ರಕರಣ ದಾಖಲಾಗಿವೆ.