ಬೆಂಗಳೂರು prajakiran.com : ರಾಜ್ಯದಲ್ಲಿ ಸೋಮವಾರವೂ ಮಹಾಮಾರಿ ಕರೋನಾ ಆರ್ಭಟ ಮುಂದುವರೆದಿದ್ದು, ಇಂದು ಮತ್ತೆ ಹೊಸದಾಗಿ 308 ಜನರಿಗೆ ಸೋಂಕು ತಗುಲಿದೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5760 ಕ್ಕೆ ಏರಿಕೆ ಕಂಡಿದೆ.
ರಾಜ್ಯದ 308 ಸೋಂಕಿತರಲ್ಲಿ, 277 ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದು, ಕಲಬುರ್ಗಿ, ಯಾದಗಿರಿ, ಬೀದರ್, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.
ಅದರಲ್ಲೂ ವಿಶೇಷವಾಗಿ ಬಿಸಲನಾಡು ಕಲಬುರಗಿಯಲ್ಲಿ 99, ಯಾದಗಿರಿಯಲ್ಲಿ 66, ಬೀದರ್ ನಲ್ಲಿ 48, ಉಡುಪಿ ಜಿಲ್ಲೆಯಲ್ಲಿ 45,ರಾಜ್ಯದ ರಾಜಧಾನಿ ಬೆಂಗಳೂರು ನಗರ ಜಿಲ್ಲೆಯಲ್ಲಿ18, ಬಳ್ಳಾರಿ 8, ಗದಗ 6, ಧಾರವಾಡ 4, ಶಿವಮೊಗ್ಗ 4, ದಕ್ಷಿಣ ಕನ್ನಡ 3, ಹಾಸನ 3, ಬಾಗಲಕೋಟೆ 2, ಕೊಪ್ಪಳ ಹಾಗೂ ರಾಮನಗರ ದಲ್ಲಿ ತಲಾ ಒಬ್ಬರಿಗೆ ಸೋಂಕು ಅಂಟಿದೆ.
ಇದೇ ವೇಳೆ ಒಂದು ಸಮಾಧಾನದ ಸಂಗತಿಯೆಂದರೆ ಕರೊನಾ ಮಹಾಮಾರಿಯಿಂದ ಇಂದು ಒಟ್ಟು 387 ಜನರು ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಇದರೊಂದಿಗೆ ಗುಣಮುಖರಾಗಿರುವವರ ಸಂಖ್ಯೆ 2519 ಕ್ಕೇರಿದೆ. ರಾಜ್ಯದಲ್ಲಿ ಸದ್ಯ 3175 ಪ್ರಕರಣಗಳು ಸಕ್ರಿಯಾಗಿದ್ದು, ಒಟ್ಟು 64 ಜನ ಕರೋನಾ ಸೋಂಕಿನಿಂದ ಈವರೆಗೆ ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.