ಜಿಲ್ಲೆಯಲ್ಲಿ ಇಂದು 226 ಜನರ ಬಿಡುಗಡೆ
ಧಾರವಾಡ prajakiran.com : ಧಾರವಾಡ ಜಿಲ್ಲೆಯ ಕರೋನಾ ಪಾಸಿಟಿವ್ ಪ್ರಕರಣ ದಿನದಿಂದ ದಿನಕ್ಕೆ ಇಳಿಕೆಯತ್ತ ಸಾಗಿದೆ.
ಸೋಂಕಿತರ ಸಂಖ್ಯೆ ಬುಧವಾರ ಮತ್ತೆ ಸ್ವಲ್ಪ ಕಡಿಮೆಯಾಗಿದೆ.
ಇಂದು ಮತ್ತೆ 112 ಜನರಿಗೆ ಕರೋನಾ ಪಾಸಿಟಿವ್ ಬಂದಿದೆ.
ದುರಂತದ ಸಂಗತಿಯೆಂದರೆ ಇಂದು ಬರೋಬ್ಬರಿ 9 ಸೋಂಕಿತರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದರು.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 6,
ಧಾರವಾಡದ ಎಸ್ ಡಿಎಂ ಆಸ್ಪತ್ರೆಯಲ್ಲಿ 2 ಹಾಗೂ ಜಿಲ್ಲಾಸ್ಪತ್ರೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.
ಆತಂಕದ ವಿಚಾರವೆಂದರೆ 464 ಜನ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1311 ಕ್ಕೆ ಎರಿಕೆ ಆಗಿದೆ.
ಸಮಾಧಾನದ ಸಂಗತಿಯೆಂದರೆ ಸೋಂಕಿತರು 226 ಜನರು ಗುಣಮುಖರಾಗಿ
ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.