ಧಾರವಾಡ prajakiran.com : ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ತಾಲೂಕಿನ ನರೇಂದ್ರ ಗ್ರಾಮದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
ಬಸವ್ವ ಚನ್ನಪ್ಪ ಬಾರಕೇರ (43) ಎಂಬುವಳೆ ಸಾವನ್ನಪ್ಪಿದ ನತದೃಷ್ಟ ಮಹಿಳೆ.
ಕಳೆದ ದಿ.14 ರಂದು ನರೇಂದ್ರದಿಂದ ಉಳವಿ ಜಾತ್ರೆಗೆ ಹೋಗುತ್ತಿದ್ದ ಟ್ರ್ಯಾಕ್ಟರ್ ಕಾರವಾರ ಜಿಲ್ಲೆಯ ಚಂದ್ರವಾಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು.
ಈ ಸಂದರ್ಭದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬಸವ್ವಳನ್ನು ಚಿಕಿತ್ಸೆಗಾಗಿ ಧಾರವಾಡಲ್ಲಿನ ಎಸ್ ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ಆಕೆ ಮೃತಪಟ್ಟಿದ್ದಾಳೆ.
ಈ ಕುರಿತು ಜೋಯಿಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.