ಉತ್ತರ ಕನ್ನಡ prajakiran.com : ಚಲಿಸುತ್ತಿದ್ದ ರೈಲಿಗೆ ಕಾಲು ಸಿಕ್ಕು ಯುವಕನೊಬ್ಬ ತನ್ನ ಕಾಲನ್ನು ಕಳೆದುಕೊಂಡ ಘಟನೆ ನಾಗರ ತಾಲೂಕಿನ ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಕಾರವಾರ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕವಚೂರು ಗ್ರಾಮದ ನವೀನ್ ಕಾಲು ಕಳೆದುಕೊಂಡ ದುರ್ದೈವಿ. ತಾಳಗುಪ್ಪದಿಂದ ಬೆಂಗಳೂರಿಗೆ ಹೊರಟಿದ್ದ ರೈಲಿಗೆ ನವೀನ್ ಹತ್ತುವಾಗ ಕಾಲು ಜಾರಿ ಬಿದ್ದು ಈ ಅನಾಹುತ ಸಂಭವಿಸಿದೆ.
ಗಂಭೀರವಾಗಿ ಗಾಯಗೊಂಡಿರುವ ನವೀನ್ರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೈಗೆ ಕೂಡ ತುಂಬಾನೇ ಪೆಟ್ಟಾಗಿದೆ ಎಂದು ತಿಳಿದುಬಂದಿದೆ.
ಈ ಘಟನೆ ವೇಳೆ ನವೀನ್ ಜೊತೆಗೆ ಇನ್ನೊಬ್ಬ ಯುವಕ ಇದ್ದ, ಈ ಅನಾಹುತವಾದಮೇಲೆ ಆತ ಪರಾರಿಯಾಗಿದ್ದಾನೆ ಎನ್ನಲಾಗಿದೆ.