*ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು*
*ಜಿಪಂ ಸದಸ್ಯ ಯೋಗೀಶಗೌಡ ಸಹೋದರ ಗುರುನಾಥ ಗೌಡರಿಗೆ ಜೀವ ಬೆದರಿಕೆ*
*ಹಾಲಿ ಶಾಸಕ ವಿನಯ ಕುಲಕರ್ಣಿ ಆಪ್ತ *ಕಾಂಗ್ರೆಸ್ ಕಾರ್ಯಕರ್ತ ಮಂಜು ಬೇಗೂರುನಿಂದ ದಮ್ಕಿ*
ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ಸಾಕ್ಷಿ ವಿಚಾರಣೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಬರುತ್ತಿರುವ ಬೆನ್ನ ಹಿಂದೆಯೇ ಧಾರವಾಡದ ಗೋವನಕೊಪ್ಪದ ಗುರುನಾಥ ಗೌಡರ ಮನೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನೊಬ್ಬ ತೆರಳಿ ಕೊಲೆ ಬೆದರಿಕೆ ಹಾಕಿದ ಘಟನೆ ನಡೆದಿದೆ.
ಧಾರವಾಡದ ಸೋಮಾಪುರ ಗ್ರಾಮದ ಮಂಜು ಬೇಗೂರ ಎಂಬಾತನೇ ಮೊಬೈಲ್ ಫೋನ್ ಮೂಲಕ ಮಧ್ಯರಾತ್ರಿ ಒಂದು ನಲವತ್ತಾರ ಸುಮಾರಿಗೆ ಕರೆ ಮಾಡಿ 46 ನಿಮಿಷಗಳ ಕಾಲ ಮಾತನಾಡಿ ಅವಾಚ್ಯವಾಗಿ ನಿಂದಿಸಿದ್ದಾನೆ.
ಈ ಸಮಯದಲ್ಲಿ ಗುರುನಾಥಗೌಡ ಗೌಡರ ಉಳವಿ ಜಾತ್ರೆಗೆ ತೆರಳಿದ್ದರು.
ಅಷ್ಟಕ್ಕೇ ಸುಮ್ಮನಾಗದ ಆತ ಮರು ದಿನಮತ್ತೆ ಅವರ ಮನೆಗೆ ತೆರಳಿ ಅವಾಚ್ಯ ಶಬ್ದಗಳನ್ನು ಬಳಸಿ ಜೀವ ಸಹಿತ ಬಿಡುವುದಿಲ್ಲ ಎಂದು ಅವಾಜ್ ಹಾಕಿದ್ದಾನೆ.
ಈತ ಧಾರವಾಡ ಹಾಲಿ ಶಾಸಕ ವಿನಯ ಕುಲಕರ್ಣಿ ಆಪ್ತನಾಗಿದ್ದು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿದ್ದಾನೆ.
ಈ ವೇಳೆ ಅವರ ಮನೆಯಲ್ಲಿದ್ದವರು ಸಮಾಧಾನ ಮಾಡಿ ಕಳುಹಿಸಿದ್ದಾರೆ. ಹೀಗಾಗಿ ಮಂಜು ಬೇಗೂರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ರಕ್ಷಣೆ ನೀಡಬೇಕು ಎಂದು ಗುರುನಾಥಗೌಡ ಗೌಡರ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ವೇಳೆ ಮಾತನಾಡಿದ
ಜನಜಾಗೃತಿ ಸಂಘದ ಅಧ್ಯಕ್ಷರಾದ ಬಸವರಾಜ ಕೊರವರ, ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ಸಾಕ್ಷಿ ವಿಚಾರಣೆ ಸಂದರ್ಭದಲ್ಲಿ ಕೊಲೆ ಬೆದರಿಕೆ ಕರೆ ಬಂದಿರುವುದು ನೋಡಿದರೆ ಇದು ಪರೋಕ್ಷವಾಗಿ ದೂರುದಾರರಿಗೆ ಹಾಗೂ ಸಾಕ್ಷಿಗಳಿಗೆ ಒತ್ತಡ ಹಾಕುವ ತಂತ್ರವಾಗಿದೆ ಎಂಬ ಶಂಕೆ ವ್ಯಕ್ತವಾಗುತ್ತಿದೆ.
ಹೀಗಾಗಿ ಪೊಲೀಸರು ಸಮಗ್ರ ತನಿಖೆ ನಡೆಸಬೇಕು. ಜೊತೆಗೆ ಗುರುನಾಥಗೌಡರ ಮನೆಗೆ ಈ ಹಿಂದೆ ಒದಗಿಸಲಾಗಿದ್ದ ಭದ್ರತೆಯನ್ನು ಯಾವುದೇ ರೀತಿಯ ಮುನ್ಸೂಚನೆ ನೀಡದೆ ವಾಪಾಸ್ ಪಡೆದು ಈವರೆಗೆ ನೀಡಲಾಗಿಲ್ಲ. ಈಗಲಾದರೂ ಪೊಲೀಸ್ ಭದ್ರತೆ ನೀಡಬೇಕು ಎಂದು ಬಸವರಾಜ ಕೊರವರ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಸಂಜು ಬಡಸ್ಕರ, ಜನಜಾಗೃತಿ ಸಂಘದ ಉಪಾಧ್ಯಕ್ಷ ನಾಗರಾಜ ಕಿರಣಗಿ ಉಪಸ್ಥಿತರಿದ್ದರು.