ಬಿಳಿಗಿರಿ ಶ್ರೀನಿವಾಸ
ಚಾಮರಾಜನಗರ prajakiran.com : ತ್ರಿಬಲ್ ರೈಡಿಂಗ್, ಮಾಡುವಾಗ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿ ಹಳ್ಳಕ್ಕೆ ಬಿದ್ದ ಘಟನೆ ಚಾಮರಾಜನಗರ ತಾಲ್ಲೂಕು ಅರಕಲವಾಡಿ ಬಳಿ ನಡೆದಿದೆ.
ತಮಿಳುನಾಡು ಮೂಲದ ಕುಮಾರ್(44), ಚಾಮರಾಜನಗರ ತಾಲ್ಲೂಕು ಮೂಡಲ ಹೊಸಹಳ್ಳಿಯ ಬಸವಯ್ಯ(63) ಸಾವನ್ನಪ್ಪಿದ್ದಾರೆ.
ಇದೇ ವೇಳೆ
ಮೂಡಲ ಹೊಸಹಳ್ಳಿ ಯ ಮಹಾದೇವಯ್ಯ ಎಂಬುವರು ಗಂಭೀರ ವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಒಂದೇ ಬೈಕ್ ನಲ್ಲಿ ಮೂವರು ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಈ ಕುರಿತು ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿ, ತನಿಖೆ ಮುಂದುವರೆದಿದೆ.