ತುಮಕೂರು Prajakiran.com : ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಹೆಚ್ಚಳವಾಗುತ್ತಿದೆ.
ತುಮಕೂರು ಜಿಲ್ಲೆಯ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಡಿ.ಮಂಜುನಾಥ್ (40) ಇಂದು ಮೃತಪಟ್ಟಿದ್ದಾರೆ.
ಮಂಜುನಾಧ್ ಅವರಿಗೆ ಕಳೆದ ಒಂದು ವಾರದ ಹಿಂದೆ ಜ್ವರ ಕಾಣಿಸಿಕೊಂಡು ನಂತರ ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಅವರ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು.
ತೀವ್ರ ಉಸಿರಾಟ ಸಮಸ್ಯೆಯಾದಾಗ ಸಮೀಪದ ಛಾಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು ನಂತರ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಆದರೆ, ಚಿಕಿತ್ಸೆ ಫಲಿಸದೆ ಭಾನುವಾರ ಅವರು ಬಾರದ ಲೋಕಕ್ಕೆ ಪಯಣ ಬೆಳಸಿದ್ದಾರೆ.
ಅವರ ಅಕಾಲಿಕ ಅಗಲಿಕೆಗೆ ಅನೇಕ ಪತ್ರಕರ್ತರು, ವಾರ್ತಾ ಇಲಾಖೆಯ ಹಿರಿಯ ಹಾಗೂ ಕಿರಿಯ ಸಹೋದ್ಯೋಗಿಗಳು ಕಂಬನಿ ಮಿಡಿದಿದ್ದಾರೆ.