ಹಾವೇರಿ prajakiran.com : ತುಂಗಭದ್ರಾ ನದಿ ಪ್ರವಾಹಕ್ಕೆ ಚಕ್ಕಡಿ ಸಮೇತ ಇಬ್ಬರು ನಾಪತ್ತೆಯಾದ ಘಟನೆ ಹಾವೇರಿ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದೆ.
ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕೋಣನತಂಬಗಿ ಗ್ರಾಮದಲ್ಲಿ ಚಕ್ಕಡಿ ಸಮೇತ ಇಬ್ಬರು ಕೊಚ್ಚಿಕೊಂಡು ಹೋಗಿದ್ದಾರೆ.
ತುಂಗಭದ್ರಾ ನದಿ ಪ್ರವಾಹಕ್ಕೆ ಎರಡು ಎತ್ತುಗಳು ಸಮೇತ ಅವರಿಬ್ಬರು ಹರಿದುಕೊಂಡು ಹೋಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಇವರಿಬ್ಬರು ಅರೆ ಮಲ್ಲಾಪುರ ಗ್ರಾಮದವರು ಎಂದು ತಿಳಿದುಬಂದಿದೆ. ಮಾಹಿತಿ ಅರಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ರಾಣೆಬೆನ್ನೂರ ಗ್ರಾಮೀಣ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಪೊಲೀಸರು ಭೇಟಿ ನೀಡಿ ಅವರ ಹುಡುಕಾಟ ನಡೆಸುತ್ತಿದ್ದಾರೆ.
ನದಿಪಾತ್ರದ ಜನರಿಗೆ ನಿನ್ನೆಯೇ ಎಚ್ಚರಿಕೆ ನೀಡಲಾಗಿತ್ತು. ಆದರೂ ಇವರು ಅಲ್ಲಿಗೆ ಎಕೆ ಹೋಗಿದ್ದರು ಎಂಬುದು ತನಿಖೆ ನಡೆಸಲಾಗುತ್ತಿದೆ.