ರಾಜ್ಯ

ತುಂಗಭದ್ರಾ ನದಿ ಪ್ರವಾಹಕ್ಕೆ ಚಕ್ಕಡಿ ಸಮೇತ ಇಬ್ಬರು ನಾಪತ್ತೆ

ಹಾವೇರಿ prajakiran.com : ತುಂಗಭದ್ರಾ ನದಿ ಪ್ರವಾಹಕ್ಕೆ ಚಕ್ಕಡಿ ಸಮೇತ ಇಬ್ಬರು ನಾಪತ್ತೆಯಾದ ಘಟನೆ ಹಾವೇರಿ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದೆ.

ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕೋಣನತಂಬಗಿ ಗ್ರಾಮದಲ್ಲಿ ಚಕ್ಕಡಿ ಸಮೇತ ಇಬ್ಬರು ಕೊಚ್ಚಿಕೊಂಡು ಹೋಗಿದ್ದಾರೆ.

ತುಂಗಭದ್ರಾ ನದಿ ಪ್ರವಾಹಕ್ಕೆ ಎರಡು ಎತ್ತುಗಳು ಸಮೇತ ಅವರಿಬ್ಬರು ಹರಿದುಕೊಂಡು ಹೋಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇವರಿಬ್ಬರು ಅರೆ ಮಲ್ಲಾಪುರ ಗ್ರಾಮದವರು ಎಂದು ತಿಳಿದುಬಂದಿದೆ. ಮಾಹಿತಿ ಅರಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ರಾಣೆಬೆನ್ನೂರ ಗ್ರಾಮೀಣ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಪೊಲೀಸರು ಭೇಟಿ ನೀಡಿ ಅವರ ಹುಡುಕಾಟ ನಡೆಸುತ್ತಿದ್ದಾರೆ.

ನದಿಪಾತ್ರದ ಜನರಿಗೆ ನಿನ್ನೆಯೇ ಎಚ್ಚರಿಕೆ ನೀಡಲಾಗಿತ್ತು. ಆದರೂ ಇವರು ಅಲ್ಲಿಗೆ ಎಕೆ ಹೋಗಿದ್ದರು ಎಂಬುದು ತನಿಖೆ ನಡೆಸಲಾಗುತ್ತಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *