ರಾಜ್ಯ

ಕುಮಾರಸ್ವಾಮಿಗೆ ಮತ್ತೊಂದು ಟಾಂಗ್ ನೀಡಿದ ಸಂಸದೆ ಸುಮಲತಾ ಅಂಬರೀಶ್

ಬೆಂಗಳೂರು prajakiran.com : ಸಂಸದೆ ಸುಮಲತಾ ಅಂಬರೀಷ್ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಡುವಿನ ವಾಗ್ದಾಳಿ ಸಮರ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ,

ಇದೀಗ ಟ್ವೀಟ್ ಮೂಲಕ ಸುಮಲತಾ ಹೆಚ್ಡಿಕೆ ಅವರಿಗೆ ಟಾಂಗ್ ನೀಡುತ್ತಿದ್ದಾರೆ.

“ಬೇರೆಯವರಿಗೆ ಗಂಧವನ್ನು ಹಚ್ಚಲು ಪ್ರಯತ್ನಿಸಿದರೆ ಮೊದಲು ನಮ್ಮ ಕೈ ಗಂಧವಾಗುತ್ತದೆ.

ಬೇರೆಯವರಿಗೆ ಕೆಸರನ್ನು ಹಚ್ಚಲು ಪ್ರಯತ್ನಿಸಿದರೆ ಮೊದಲು ನಮ್ಮ ಕೈ ಕೆಸರಾಗುತ್ತದೆ” ಎಂದು ಸುಮಲತಾ ಪರೋಕ್ಷವಾಗಿ ಹೆಚ್ಡಿಕೆ ಅವರಿಗೆ ಟ್ವಿಟ್ಟರ್ ಟಾಂಗ್ ನೀಡಿದ್ದಾರೆ.

ಇನ್ನೂ ನಿನ್ನೆ ತಾನೇ,
“ಸತ್ಯದ ಪರವಾಗಿ ನಿಂತಾಗ ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳುತ್ತಾರೆ. ಕೆಲವರು ಮಹಿಳೆಯರು ಅಧಿಕಾರದಲ್ಲಿರುವುದನ್ನು ಸಹಿಸಿಕೊಳ್ಳಲಾರರು.

ಭ್ರಷ್ಟರು ನಿಷ್ಠಾವಂತ ಅಧಿಕಾರಿಗಳಿಗೆ ವರ್ಗಾವಣೆ, ಒತ್ತಡ, ಕಿರುಕುಳ ಕೊಡಬಲ್ಲರು. ಪಾಪ ಸಂಸದರನ್ನು ವರ್ಗಾವಣೆ ಮಾಡಲು ಬರುವುದಿಲ್ಲ” ಎಂದು ಟೀಕೆ ಮಾಡಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *