ಧಾರವಾಡ prajakiran. com : ಧಾರವಾಡ ಜಿಲ್ಲೆಯಾದ್ಯಂತ ಕೋವಿಡ್-19 ತಡೆಗಟ್ಟುವ ಹಿನ್ನಲೆಯಲ್ಲಿ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೇಷ್ಟಿಯಿಂದ ಮೇ 22, 2021 ರಂದು ಬೆಳಿಗ್ಗೆ 6 ಗಂಟೆಯಿಂದ ಮೇ 24,2021 ರ ಬೆಳಿಗ್ಗೆ 6 ಗಂಟೆವರೆಗೆ ಧಾರವಾಡ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್ಡೌನ್ ಮಾಡುವಂತೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಆದೇಶಿಸಿದ್ದು, ಪೊಲೀಸ್ ಇಲಾಖೆಯಿಂದ ಅಗತ್ಯ ಸಿಬ್ಬಂದಿಗಳನ್ನು ನೇಮಿಸಿ ಸೂಕ್ತ ಬಂದೋಬಸ್ತ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ ಬರುವಂತಹ ಹಳ್ಳಿಗಳಲ್ಲಿ ಮೇ 22, 2021 ರಂದು ಬೆಳಿಗ್ಗೆ 6 ಗಂಟೆಯಿಂದ ಮೇ 24,2021 ರ ಬೆಳಿಗ್ಗೆ 6 ಗಂಟೆವರೆಗೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಬಂದೋಬಸ್ತ ಕರ್ತವ್ಯಕ್ಕೆ ನೇಮಿಸಲಾಗಿದೆ. ಸಾರ್ವಜನಿಕರು ಅನಾವಶ್ಯಕವಾಗಿ ತಿರುಗಾಡದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತಿದೆ.
ಸಾರ್ವಜನಿಕರು ತುರ್ತು ವೈದ್ಯಕೀಯ ಸೌಲಭ್ಯವನ್ನು ಹೊರತು ಪಡಿಸಿ, ಉಳಿದ ಎಲ್ಲ ಅಂಗಡಿ ಮುಗ್ಗಟ್ಟು ಮತ್ತು ಹೋಟೆಲ ತೆರೆಯುವುದನ್ನು ನಿರ್ಬಂಧಿಸಲಾಗಿದೆ.
ಸೂಕ್ತ ಬಂದೋಬಸ್ತ ನಿರ್ವಹಿಸಲು 3 ಜನ ಡಿ.ಎಸ್.ಪಿ, 4 ಜನ ಪಿ.ಐ, 3 ಜನ ಪಿ.ಎಸ್.ಐ ಹಾಗೂ ಸಿಬ್ಬಂದಿಗಳನ್ನು ಕರ್ತವ್ಯಕ್ಕಾಗಿ ನೇಮಿಸಲಾಗಿದೆ. ಪ್ರತಿ ಪೊಲೀಸ್ ಠಾಣಾ ಸರಹದ್ದಿನಲ್ಲಿ ಸಿಬ್ಬಂದಿ ಸಹಿತ ಬ್ಯಾರಿಕೇಡಗಳನ್ನು ಸೂಕ್ಷ್ಮ ಸ್ಥಳಗಳಲ್ಲಿ ಅಳವಡಿಸಲಾಗಿದೆ. ಹೆಚ್ಚುವರಿಯಾಗಿ 04 ಹೈವೇ ಪೆಟ್ರೋಲಿಂಗ್ ವಾಹನ ಮತ್ತು 09 ಡಿ.ಎ.ಆರ್ ತುಕಡಿಗಳನ್ನು ನೇಮಿಸಲಾಗಿದೆ.
ಸಾರ್ವಜನಿಕರು ಕೋವಿಡ್-19 ಸೊಂಕು ಹರಡದಂತೆ ಮನೆಯಲ್ಲಿಯೇ ಇದ್ದು ಸರ್ಕಾರದ ಆದೇಶವನ್ನು ಪಾಲಿಸಬೇಕು ಎಂದು ಅವರು ವಿನಂತಿಸಿದ್ದಾರೆ.
ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಗಳ ಜೊತೆಗೆ ಕೊರೋನಾ ತಡೆಗಟ್ಟಲು ಸಹಕರಿಸಬೇಕು. ಅನಾವಶ್ಯಕವಾಗಿ ಪೊಲೀಸ್ ಅವರ ಜೊತೆಗೆ ವಾದ ಮಾಡಬೇಡಿ. ಹಳ್ಳಿ, ಗಲ್ಲಿಯಲ್ಲಿ ಅವಶ್ಯಕವಾಗಿ ಪೆಟ್ರೋಲಿಂಗ ಮಾಡಿ ಕೋರೋನಾ ತಡೆಗಟ್ಟವು ಪ್ರಯತ್ನ ಜಾರಿ ಇರುತ್ತದೆ. ವಾಹನದ ಒಡಾಟ ಬಂದ್ ಮಾಡಲಾಗಿದೆ.
ಮಾಸ್ಕ ಇಲ್ಲದೇ ವಾಹನಗಳ ಮೇಲೆ ಒಡಾಡುವವರ ವಿರುದ್ಧ ಕೇಸ್ ಮಾಡಲಾಗುವುದು.
ಸರ್ಕಾರದ ಆದೇಶವನ್ನು ಸಾರ್ವಜನಿಕರು ಪಾಲಿಸದೇ ಇದ್ದಲ್ಲಿ ಅಂತಹವರ ಮೇಲೆ ಸಾಂಕ್ರಾಮಿಕ ರೋಗ ತಡೆ ಕಾಯ್ದೆ 1897 ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗ ಕೋವಿಡ್-19 ಕಾಯ್ದೆ ನಿಯಮಾವಳಿ-2020 ರ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ತಿಳಿಸಿದ್ದಾರೆ.