ರಾಜ್ಯ

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಆಯುಕ್ತೆ ಶಿಲ್ಪಾನಾಗ್ ಇಬ್ಬರಿಗೂ ವರ್ಗಾವಣೆ ಶಾಕ್ ನೀಡಿದ ಸರಕಾರ

ಮೈಸೂರು prajakiran.com : ರಾಜ್ಯದ ಬಿಜೆಪಿ ಸರ್ಕಾರಕ್ಕೆ ತೀವ್ರ ಮುಜುಗರವನ್ನುಂಟು ಮಾಡಿದ್ದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತೆ ಶಿಲ್ಪಾನಾಗ್‌ರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಈ ಇಬ್ಬರು ಐಎಎಸ್ ಅಧಿಕಾರಿಗಳ ಬಹಿರಂಗ ಕಲಹದ ಬಗ್ಗೆ ಮೈಸೂರಿಗೆ ಆಗಮಿಸಿ ವಿಚಾರಣೆ ನಡೆಸಿದ್ದ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರು ಮುಖ್ಯಮಂತ್ರಿ ಯಡಿಯೂರಪ್ಪಗೆ ಸಂಪೂರ್ಣ ವರದಿ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ಈ ಇಬ್ಬರು ವಿವಾದಾಸ್ಪದ ಅಧಿಕಾರಿಗಳನ್ನು ಮೈಸೂರಿನಿಂದ ವರ್ಗಾವಣೆ ಮಾಡಲು ಆದೇಶಿಸಲಾಗಿದೆ.

ಇವರಿಬ್ಬರು ಐಎಎಸ್ ಅಧಿಕಾರಿಗಳ ನಡುವೆ ಸಿ ಎಸ್ ಆರ್ ಫಂಡ್ ಬಳಕೆ ಬಗ್ಗೆ  ಹಾಗೂ ವೈಯಕ್ತಿಕ ತಿಕ್ಕಾಟ ಹೆಚ್ಚಾಗಿತ್ತು. ಇದಕ್ಕೆ ಜನಪ್ರತಿನಿಧಿಗಳ ಕುಮ್ಮಕ್ಕು ನೀಡಿದ್ದರು.

ಅದನ್ನು ಅರಿತುಕೊಳ್ಳದೆ ತೀವ್ರ ಮುಖಭಂಗ ಅನುಭವಿಸಬೇಕಾಯಿತು ಎಂದರೆ ತಪ್ಪಾಗಲಾರದು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *