ಬೆಳಗಾವಿ prajakiran.com : ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಚಿಕ್ಕ ಉಳ್ಳಿಗೇರಿ ಗ್ರಾಮದಲ್ಲಿ ಸಂಜೆ ಸಿಡಿಲು ಬಡಿದು ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.
ಇನ್ನೂ ಓರ್ವಳ ಗೆ ಗಂಭೀರ ಗಾಯವಾಗಿದ್ದು,ಸಮೀಪದ ಇನಾಂಹೊಂಗಲ ಗ್ರಾಮದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹೊಲದಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದಿದ್ದು,ತಕ್ಷಣ ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯದಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ರಿದ್ರೆ ಓರ್ವಳಿಗೆ ಗಂಭೀರ ಗಾಯಗಳಾಗಿವೆ.
ಮೃತರನ್ನು
ಭಾಗವ್ವ ಕಡಕೋಳ (50)
ಯಲ್ಲವ್ವಾ ಇಂಚಲ (30) ಎಂದು ಗುರುತಿಸಲಾಗಿದ್ದು,ಗಾಯಾಳು ರೇಣವ್ವಾ ಮೂಗಬಸವ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಸವದತ್ತಿ ಶಾಸಕ ಹಾಗೂ ಉಪಸಭಾಪತಿ ಆನಂದ ಮಾಮನಿ ಹಾಗೂ ಸಿಪಿಐ,ಪಿಎಸ್ಐ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಸವದತ್ತಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.