ಬೆಂಗಳೂರು prajakiran.com : ರಾಜ್ಯದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆಯ ಪ್ರಮಾಣದಲ್ಲಿ ಭಾರಿ ಇಳಿಕೆಯಾಗುತ್ತಿದ್ದು, ಪಾಸಿಟಿವಿಟಿ ದರ ಕೂಡ ಶೇ.2.5ಕ್ಕೆ ಕುಸಿದಿದೆ.
ಈ ಕುರಿತು ಸರ್ಕಾರ ಶನಿವಾರ ಸಭೆ ನಡೆಸಿ ಅನ್ ಲಾಕ್ 3.0 ಮಾರ್ಗಸೂಚಿ ಬಿಡುಗಡೆ ಮಾಡಲಿದೆ.
ರಾಜ್ಯದಲ್ಲಿ ವಿಸ್ತರಿಸಲಾಗಿದ್ದ ಲಾಕ್ ಡೌನ್ ಅವಧಿಯು ಸೋಮವಾರ ಅಂತ್ಯಗೊಳ್ಳಲಿದ್ದು, ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರಿಗಳು ಹಾಗೂ ಸಚಿವರ ಜೊತೆ ಸಭೆ ನಡೆಸಲಿದ್ದು, ಹೊಸ ಮಾರ್ಗಸೂಚಿ ಬಿಡುಗಡೆ ಮಾಡಬಹುದಾಗಿದೆ.
ಲಾಕ್ ಡೌನ್ ನಿಯಮ ಸಡಿಲಗೊಳಿಸಿದರೂ ರಾಜ್ಯದಲ್ಲಿ ನೈಟ್ ಕರ್ಫ್ಯೂ ಮುಂದುವರೆಸುವ ಚಿಂತನೆ ನಡೆಸಲಿದೆ ಎಂಬ ಮಾಹಿತಿ ಕೇಳಿಬರುತ್ತಿದೆ.
ಸಂಜೆ 7 ಗಂಟೆಗೆ ಇರುವ ಕರ್ಫ್ಯೂ ಅವಧಿಯನ್ನು 9 ಗಂಟೆಗೆ ವಿಸ್ತರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.