ಹಿಂದಿನಂತೆ ಕೇವಲ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ
ಧಾರವಾಡ prajakiran.com : ಸೋಮವಾರದಿಂದ ರಾಜ್ಯದ 16 ಜಿಲ್ಲೆಗಳಲ್ಲಿ ಅನ್ ಲಾಕ್ ಘೋಷಣೆ ಮಾಡಲಾಗಿದೆ.
ಆದರೆ, ಧಾರವಾಡ ಜಿಲ್ಲೆ ಸೇರಿದಂತೆ
ಶೇ 5 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ದಿನಾಂಕ: 11-06-2021 ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಶೇ. 2.5% ಆಗಿದೆ ಎಂದು ಸ್ವತಃ ಜಿಲ್ಲಾಡಳಿತವೇ ಘೋಷಿಸಿಕೊಂಡಿದೆ.
ಆದರೆ ಇದನ್ನು ಮುಖ್ಯಮಂತ್ರಿ ಗಮನಕ್ಕೆ ತರುವಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ವಿಫಲರಾದರಾ ಅಥವಾ ಮುಖ್ಯಮಂತ್ರಿ ಗಳಿಗೆ ಮನದಟ್ಟು ಮಾಡಲು ಸಾಧ್ಯವಾಗಲಿಲ್ಲವಾ ಇಲ್ಲವೇ ಜಿಲ್ಲೆಯ ಪಾಸಿಟಿವಿಟಿ ರೇಟ್ ಜಾಸ್ತಿಇದೆಯಾ ಎಂಬುದು ಜನತೆಗೆ ಗೊತ್ತಾಗುತ್ತಿಲ್ಲ.
ಎಕೆಂದರೆ ನಾಳೆಯಿಂದ ಜೂ. 21 ರಿಂದ ಜು.5 ರವರೆಗೆ ಸೋಮವಾರದಿಂದ ಶೇ. 50 ರಷ್ಟು
ಬಸ್, ಮೆಟ್ರೋ ಸಂಚಾರಕ್ಕೆ ಅನುಮತಿ
ಸಿನಿಮಾ ಶೂಟಿಂಗ್ ಶುರು ಸೇರಿದಂತೆ ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳಿಗೆ
ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗಿದೆ.
ಎಸಿ. ಚಾಲನೆಗೊಳಿಸದೇ ಹೋಟೆಲ್, ಕ್ಲಬ್ಸ್, ರೆಸ್ಟೋರೆಂಟ್ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ಮಾಡಿಕೊಡಲಾಗಿದೆ.
ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.
ಬಸ್ ಮತ್ತು ಮೆಟ್ರೋ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಿದೆ.
ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ.
ಸರ್ಕಾರಿ/ಖಾಸಗಿ ಕಚೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ.
ಲಾಡ್ಜ್ ಗಳಲ್ಲಿ ಮತ್ತು ರೆಸಾರ್ಟ್ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.
ಜಿಮ್ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.
ಇವೆಲ್ಲಾ ಧಾರವಾಡ ಜಿಲ್ಲೆಯ ಜನರಿಗೆ ಇಲ್ಲದಿರುವುದು
ಅಚ್ಚರಿ ಹಾಗೂ ಆತಂಕ ಮೂಡಿಸಿದೆ.
ಧಾರವಾಡ ಜಿಲ್ಲಾಡಳಿತ ಈಗಲಾದರೂ ಈ ಬಗ್ಗೆ ಗಮನ ಹರಿಸಿ, ಗೊಂದಲ ನಿವಾರಿಸಬೇಕಿದೆ.
ಪಾಸಿಟಿವಿಟಿ ರೇಟ್ 5% ಕ್ಕಿಂತ ಕಡಿಮೆ ಇದ್ದಾಗಲೂ ಅನ್ ಲಾಕ್ ಮುಂದುವರೆಸಿದಿದ್ದಾರೂ ಯಾಕೆ ಎಂಬುದಕ್ಕೆ ಜಾಣ ಮೌನವೇ ಉತ್ತರವಾಗಿದೆ.