ರಾಜ್ಯ

ಧಾರವಾಡದ ಜನತಾ ಶಿಕ್ಷಣ ಸಮಿತಿಯ ರೂವಾರಿ ವಜ್ರಕುಮಾರ್ ಇನ್ನು ನೆನಪು ಮಾತ್ರ

ಧಾರವಾಡ prajakiran.com : ಧಾರವಾಡದ ಜನತಾ ಶಿಕ್ಷಣ ಸಮಿತಿ ಹೆಮ್ಮರವಾಗಿ ಬೆಳೆದು ನಿಲ್ಲುವಂತೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ನ. ವಜ್ರಕುಮಾರ್ ಅವರು ಇಹಲೋಕ ತ್ಯಜಿಸಿದರು.

ಅವರು ಕಳೆದ ಹಲವಾರು ತಿಂಗಳುಗಳಿಂದ ವಯೋಸಹಜ ಕಾಯಿಲೆಯಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಧಾರವಾಡದ ಎಸ್ ಡಿ ಎಂ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ವಿಧಿವಶರಾದರು.
ಅವರಿಗೆ 84 ವರ್ಷಗಳಾಗಿತ್ತು.

ಅವರು ಜೆ ಎಸ್ ಎಸ್
ಕಾರ್ಯದರ್ಶಿ ಹಾಗೂ ಎಸ್ ಡಿ ಎಂ ಸಂಸ್ಥೆಯ ಉಪಾಧ್ಯಕ್ಷರಾಗಿ ಸಲ್ಲಿಸಿದ ಗಣನೀಯ ಸೇವೆ ಪರಿಗಣಿಸಿ ಹತ್ತು ಹಲವು ಪ್ರಶಸ್ತಿ ಗೌರವಗಳು ಸಂದಿದ್ದವು.

ಡಾ. ನ. ವಜ್ರಕುಮಾರವರ ಪ್ರಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಬೆಳಿಗ್ಗೆ 8 ಗಂಟೆಯಿಂದ 9.30 ರವರೆಗೆ ಧಾರವಾಡದ ವಿದ್ಯಾಗಿರಿ ಕ್ಯಾಂಪಸನಲ್ಲಿ ವ್ಯವಸ್ಥೆ ಮಾಡಲಾಗಿತ್ತು.

ನೂರಾರು ಗಣ್ಯರು ಅಂತಿಮ ದರ್ಶನ ಪಡೆದು ಕಂಬನಿ ಮಿಡಿದರು.
ಇದೇ ವೇಳೆ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಅವರ ಅಂತ್ಯಕ್ರಿಯೆಯ ವಿಧಿವಿಧಾನಗಳು ಹುಟ್ಟುರಾದ ದಕ್ಷಿಣ ಕನ್ನಡ ಜಿಲ್ಲೆಯ ಯರ್ಮಾಳದಲ್ಲಿ ಜರುಗಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *