ಅಂತಾರಾಷ್ಟ್ರೀಯ

ಲಸಿಕೆ, ಆಕ್ಸಿಜನ್ ಕೊರತೆ ಸರ್ಕಾರದ ವೈಫಲ್ಯ ಎಂದ ಪ್ರಿಯಾಂಕಾ ಗಾಂಧಿ

ನವದೆಹಲಿ prajakiran. com : ವಿಶ್ವಕ್ಕೆ ಹೋಲಿಸಿದರೆ ಭಾರತದಲ್ಲಿ ಆಕ್ಸಿಜನ್ ಬೃಹತ್ ಪ್ರಮಾಣದಲ್ಲಿ ಉತ್ಪಾದಿಸಲಾಗುತ್ತದೆ.

ಹೀಗಿರುವಾಗ ಕೊರತೆ ಏಕೆ ಉಂಟಾಗುತ್ತಿದೆ. ಸರ್ಕಾರದ ಸಮೀಕ್ಷೆಯೇ ಎರಡನೇ ಅಲೆ ತೀವ್ರವಾಗಿದೆ ಎಂದು ಹೇಳುತ್ತಿದೆ,

ಆದರೆ ನೀವು ಅದನ್ನು ನಿರ್ಲಕ್ಷ್ಯ ಮಾಡಿದಿರಿ ಎಂದು ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೇಂದ್ರ ಸರ್ಕಾರವನ್ನು ವಿರುದ್ಧ ಗುಡುಗಿದ್ದಾರೆ.

ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ಸರ್ಕಾರದ ಮುಂದೆ ಸಾಕಷ್ಟು ಸಮಯವಿತ್ತು.

ಇಂದು ಭಾರತ ಕೇವಲ 2 ಸಾವಿರ ಟ್ರಕ್ ನಷ್ಟು ಮಾತ್ರ ಆಕ್ಸಿಜನ್ ನ್ನು ಸಾಗಾಟ ಮಾಡಬಹುದಾಗಿದೆ. ಆಕ್ಸಿಜನ್ ನಮ್ಮಲ್ಲಿ ಇದೆ,

ಆದರೆ ಅದು ಎಲ್ಲಿಗೆ ತಲುಪಬೇಕೋ ಅಲ್ಲಿಗೆ ತಲುಪುತ್ತಿಲ್ಲ. ಕಳೆದ ಆರು ತಿಂಗಳಲ್ಲಿ 1.1 ಮಿಲಿಯನ್ ರೆಮೆಡಿಸಿವಿರ್ ರಫ್ತಾಗಿದೆ. ಇಂದು ನಾವು ಕೊರತೆ ಎದುರಿಸುತ್ತಿದ್ದೇವೆ ಎಂದರೆ ಏನರ್ಥ ಎಂದು ಪ್ರಶ್ನಿಸಿದ್ದಾರೆ.

ಕಳೆದ ಜನವರಿಯಿಂದ ಮಾರ್ಚ್ ಮಧ್ಯೆ ಕೇಂದ್ರ ಸರ್ಕಾರ 6 ಕೋಟಿ ಲಸಿಕೆಗಳನ್ನು ರಫ್ತು ಮಾಡಿದೆ.

ಸರ್ಕಾರದ ತಪ್ಪು ನಿರ್ಧಾರ, ಸರಿಯಾದ ಯೋಜನೆಯಿಲ್ಲದೆ ಲಸಿಕೆಯ, ರೆಮೆಡಿಸಿವಿರ್, ಆಕ್ಸಿಜನ್ ಕೊರತೆ ಸರಿಯಾದ ಕಾರ್ಯತಂತ್ರ ರೂಪಿಸದೆ ಇಂದು ಉಂಟಾಗಿದೆ ಎಂದು ಪ್ರಿಯಾಂಕಾ ಆರೋಪಿಸಿದರು.

ದೇಶದಲ್ಲಿ ಉಂಟಾಗಿರುವ ಭೀಕರ ಆರೋಗ್ಯ ತುರ್ತು ಪರಿಸ್ಥಿತಿ ಬಗ್ಗೆ ಅವರಿಗೆ ಗಾಂಭೀರ್ಯತೆಯೇ ಇಲ್ಲದಾಗಿದೆ,

ಜನ ಅಳುತ್ತಿದ್ದಾರೆ, ಸಹಾಯಕ್ಕಾಗಿ ಅಂಗಲಾಚುತ್ತಿದ್ದಾರೆ. ಆಕ್ಸಿಜನ್, ಆಸ್ಪತ್ರೆಗಳಲ್ಲಿ ಬೆಡ್, ಔಷಧಿಗೋಸ್ಕರ ಬೊಬ್ಬಿಡುತ್ತಿದ್ದಾರೆ.

ಆದರೆ ಸರ್ಕಾರದ ನಾಯಕರು ಮಾತ್ರ ರ್ಯಾಲಿಗಳಲ್ಲಿ ಭಾಗಿಯಾಗುತ್ತಾ ನಗುತ್ತಿದ್ದಾರೆ. ಇದು ಹೇಗೆ ಸಾಧ್ಯ ಎಂದು ಟೀಕಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *