ಬೆಂಗಳೂರು prajakiran.com : ದೇಶದಲ್ಲಿ ಕೊರೋನಾ ಸೃಷ್ಟಿಸಿರುವ ಅವಾಂತರ ಅಷ್ಟಿಷ್ಟಲ್ಲ.
ದಿನೇ ದಿನೇ ಹಲವಾರು ಜನರನ್ನು ಬಲಿಪಡೆಯುತ್ತಿದೆ. ಇದೀಗ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಅವರ ತಾಯಿ ಚೆಲುವಾಂಬ (63) ಕೊರೋನಾ ದಿಂದ ನಿಧನರಾಗಿದ್ದಾರೆ.
ಚಿಕ್ಕಮಗಳೂರ ಕಡೂರಿನ ಚೆಲುವಾಂಬ ಅವರಿಗೆ ಅನಾರೋಗ್ಯದ ಕಾರಣದಿಂದಾಗಿ ಏ.20 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊರೋನಾ ಪರೀಕ್ಷೆಯಲ್ಲಿ ವರದಿ ಪಾಸಿಟಿವ್ ಬಂದಿದೆ.
ನಾಲ್ಕು ದಿನಗಳಿಂದ ಹೋಂ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಕಳೆದ ರಾತ್ರಿ ಅತಿಯಾದ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.