ಬೆಂಗಳೂರು prajakiran.com :
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದ ನಾಡಿನ ವಿವಿಧ ಭಾಗಗಳ ಮಠಾಧೀಶರಿಗೆ ಕವರ್ ಹಂಚಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.
ಇದು ರಾಜ್ಯದ ರಾಜಕಾರಣದಲ್ಲಿ ಮಿಂಚಿನ ಸಂಚಲನ ಸೃಷ್ಟಿಸಿದೆ.
ಬುಧವಾರ ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದ ಸ್ವಾಮೀಜಿಗಳಿಗೆ ಅವರ ಸಮ್ಮುಖದಲ್ಲಿ ವಿಜಯೇಂದ್ರ ಆಪ್ತ ಕೆ ಆರ್ ಡಿ ಎಲ್ ಅಧ್ಯಕ್ಷ ರುದ್ರೇಶ್ ಅವರು
ಕವರ್ ಹಂಚಿದ್ದಾರೆ.
ಈ ಕವರ್ ನಲ್ಲಿ ಸ್ವಾಮೀಜಿಗಳಿಗೆ ಕಾಣಿಕೆ (ಹಣ) ನೀಡಲಾಗಿದೆಯೇ? ಎನ್ನುವ ಪ್ರಶ್ನೆ ಕೇಳಿ ಬರುತ್ತಿದೆ.
ಬಳಿಕ ಹೊರ ಬಂದ ಸ್ವಾಮೀಜಿಯವರು ಮಾಧ್ಯಮಗಳ ಮುಂದೆ ಮಾತನಾಡಿ,
ಯಡಿಯೂರಪ್ಪನವರನ್ನೇ ಸಿಎಂ ಆಗಿ ಮುಂದುವರಿಸಬೇಕು ಎಂದು
ಒತ್ತಾಯಿಸಿದ್ದರು.
ಅಲ್ಲದೆ, ಒಂದು ವೇಳೆ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದರೆ ಸಾಮೂಹಿಕ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಸ್ವಾಭಾವಿಕವಾಗಿ ಕವರ್ ನಲ್ಲಿ ಹಣ ಇತ್ತಾ ಅದನ್ನು ಸ್ವಾಮೀಜಿ ಅವರು ಸ್ವೀಕರಿಸಿದ ನಂತರ ಬ್ಯಾಟಿಂಗ್ ಮಾಡುತ್ತಿದ್ದಾರೆಯೇ ಎಂದು ಕೆಲವರು ಕುಹಕವಾಡುತ್ತಿದ್ದಾರೆ.