ರಾಜ್ಯ

ಧಾರವಾಡ : ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ವಾಹನಗಳು

ಧಾರವಾಡ ಪ್ರಜಾಕಿರಣ.ಕಾಮ್ : ಆಕಸ್ಮಿಕ ಬೆಂಕಿ ತಗುಲಿ ಧಾರವಾಡದ ಮಕ್ಕಳ ರಕ್ಷಣಾ ಘಟಕದ ಆವರಣದಲ್ಲಿದ್ದ ಎರಡು ವಾಹನಗಳು ಹೊತ್ತಿ ಉರಿದ ಘಟನೆ ಮಂಗಳವಾರ ಸಂಭವಿಸಿದೆ.

ಧಾರವಾಡದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಬಳಿ ಈ ಮಕ್ಕಳ ರಕ್ಷಣಾ ಘಟಕದ ಆವರಣದಲ್ಲಿದ್ದ ಮಿನಿ ಬಸ್ ಹಾಗೂ ಜೀಪ್‌ಗೆ ಬೆಂಕಿ ತಗುಲಿದೆ.

ಬೆಂಕಿಯಿಂದಾಗಿ ಎರಡು ವಾಹನಗಳು ಧಗಧಗನೇ ಉರಿಯುತ್ತಿದ್ದಂತೆಯೇ ಕಚೇರಿ ಸಿಬ್ಬಂದಿ ಕೂಡಲೇ ಅಗ್ನಿಶಾಮಕ ದಳದವರಿಗೆ ಮಾಹಿತಿ ಮುಟ್ಟಿಸಿದರು.

ಸ್ಥಳಕ್ಕೆ ಧಾವಿಸಿ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡುತ್ತಿದ್ದು, ಈ ವಾಹನಗಳಿಗೆ ಹೇಗೆ ಬೆಂಕಿ ಹತ್ತಿಕೊಂಡಿತು ಎಂಬುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *