ಧಾರವಾಡ ಪ್ರಜಾಕಿರಣ.ಕಾಮ್ : ಆಕಸ್ಮಿಕ ಬೆಂಕಿ ತಗುಲಿ ಧಾರವಾಡದ ಮಕ್ಕಳ ರಕ್ಷಣಾ ಘಟಕದ ಆವರಣದಲ್ಲಿದ್ದ ಎರಡು ವಾಹನಗಳು ಹೊತ್ತಿ ಉರಿದ ಘಟನೆ ಮಂಗಳವಾರ ಸಂಭವಿಸಿದೆ.
ಧಾರವಾಡದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಬಳಿ ಈ ಮಕ್ಕಳ ರಕ್ಷಣಾ ಘಟಕದ ಆವರಣದಲ್ಲಿದ್ದ ಮಿನಿ ಬಸ್ ಹಾಗೂ ಜೀಪ್ಗೆ ಬೆಂಕಿ ತಗುಲಿದೆ.
ಬೆಂಕಿಯಿಂದಾಗಿ ಎರಡು ವಾಹನಗಳು ಧಗಧಗನೇ ಉರಿಯುತ್ತಿದ್ದಂತೆಯೇ ಕಚೇರಿ ಸಿಬ್ಬಂದಿ ಕೂಡಲೇ ಅಗ್ನಿಶಾಮಕ ದಳದವರಿಗೆ ಮಾಹಿತಿ ಮುಟ್ಟಿಸಿದರು.
ಸ್ಥಳಕ್ಕೆ ಧಾವಿಸಿ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡುತ್ತಿದ್ದು, ಈ ವಾಹನಗಳಿಗೆ ಹೇಗೆ ಬೆಂಕಿ ಹತ್ತಿಕೊಂಡಿತು ಎಂಬುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಾಗಿದೆ.