ಅಂತಾರಾಷ್ಟ್ರೀಯ

ವಿಜಯಪುರ ಯೋಧ ಜಮ್ಮು ಕಾಶ್ಮೀರದಲ್ಲಿ ಹುತಾತ್ಮ

ಶ್ರೀನಗರ Prajakiran.com : ವಿಜಯಪುರ ಜಿಲ್ಲೆಯ ಬಿಎಸ್ಎಫ್ ಯೋಧ ಜಮ್ಮು ಕಾಶ್ಮೀರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಅವಘಡಕ್ಕೆ ಸಿಲುಕಿ ಹುತಾತ್ಮರಾಗಿದ್ದಾರೆ.

ಕಳೆದ 14 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ 31 ವರ್ಷದ ಯೋಧ ಶಿವಾನಂದ ಬಡಿಗೇರ ಅವರೇ ಹುತಾತ್ಮರಾದ ಯೋಧರಾಗಿದ್ದಾರೆ.

ಈ ಮೊದಲು ಅವರು ಬಾಂಗ್ಲಾ ಗಡಿಯಲ್ಲಿ ಸೇವೆ ಸಲ್ಲಿಸಿ ಆಬಳಿಕ ಜಮ್ಮು ಕಾಶ್ಮೀರಕ್ಕೆ  ನಿಯೋಜನೆಗೊಂಡಿದ್ದರು.

ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಯೋಧ ಶಿವಾನಂದ ವಿಧಿವಶರಾಗಿದ್ದಾರೆ ಎಂದು ಘಟನೆ ಕುರಿತು ಮೃತ ಶಿವಾನಂದ ಸಹೋದರ ಕಾಳಪ್ಪ ಬಡಿಗೇರ ಗೆ ಸೇನಾ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಇದರಿಂದಾಗಿ ಶಿವಾನಂದ  ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *